Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...