Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...