Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...