Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...