Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...