Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...