Homeಕರ್ನಾಟಕವಿಜಯಪುರ| ಜನನಿಬಿಡ ರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆಗೈದ 60 ವರ್ಷದ ವ್ಯಕ್ತಿ

ವಿಜಯಪುರ| ಜನನಿಬಿಡ ರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆಗೈದ 60 ವರ್ಷದ ವ್ಯಕ್ತಿ

- Advertisement -
- Advertisement -

ವಿಜಯಪುರ ನಗರದ ಸಿಂದಗಿ ಪಟ್ಟಣದ ಜನನಿಬಿಡ ರಸ್ತೆಯ ಮಧ್ಯದಲ್ಲಿ ಕ್ಯಾಪ್ ಧರಿಸಿ, ಒಂದು ಕೈಯಲ್ಲಿ ಮಚ್ಚಿನಿಂದ ಮತ್ತು ಇನ್ನೊಂದು ಕೈಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಿಡಿದುಕೊಂಡು ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸುತ್ತಿರುವ ಆತಂಕಕಾರಿ ವೀಡಿಯೊ ವೈರಲ್ ಆಗಿದೆ.

ವಿಜಯಪುರದ ಸಿಂದಗಿ ಪಟ್ಟಣದ ಆನಂದ್ ಟಾಕೀಸ್ ಬಳಿ ಈ ಘಟನೆ ವರದಿಯಾಗಿದೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಹಲ್ಲೆ ಈಗ ವ್ಯಾಪಕ ಚರ್ಚೆಯಲ್ಲಿದೆ.

ಆರೋಪಿ ಯಮನಪ್ಪ ಮಾದರ್ (60) ತನ್ನ ಪತ್ನಿ ಅನುಸೂಯಾ ಮಾದರ್ (50) ಮೇಲೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ, ಸೀರೆಯುಟ್ಟಿದ್ದ ಮಹಿಳೆಯನ್ನು ಬೆನ್ನಟ್ಟಿದ ವ್ಯಕ್ತಿ, ಮಚ್ಚಿನಿಂದ ಪದೇ ಪದೇ ಹಲ್ಲೆ ಮಾಡುವುದನ್ನು ಕಾಣಬಹುದು. ಒಂದು ಹಂತದಲ್ಲಿ, ಮಹಿಳೆ ರಸ್ತೆಯ ಮೇಲೆ ರಕ್ತಸಿಕ್ತವಾಗಿ ಕುಸಿದು ಬೀಳುತ್ತಿರುವುದು ವೀಡಿಯೊದಲ್ಲಿ ಸೆಯಾಗಿದೆ. ಸಾರ್ವಜನಿಕರ ಮಧ್ಯಪ್ರವೇಶದ ಹೊರತಾಗಿಯೂ ವ್ಯಕ್ತಿ ಪತ್ನಿಗೆ ಹಲ್ಲೆ ಮುಂದುವರಿಸಿದ್ದಾನೆ.

ಮಹಿಳೆಯನ್ನು ಹೊಡೆದ ನಂತರ ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಮತ್ತೊಬ್ಬ ವ್ಯಕ್ತಿ ಮರದ ದಿಮ್ಮಿಯಿಂದ ಆತನಿಗೆ ಹೊಡೆದಾಗ, ದಾಳಿಕೋರ ರಸ್ತೆಯಲ್ಲೇ ಕುಸಿದು ಬೀಳುತ್ತಾನೆ.

ಪತಿ ಮತ್ತು ಪತ್ನಿ ಇಬ್ಬರನ್ನೂ ಚಿಕಿತ್ಸೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಯವಿಟ್ಟು ನನಗೆ ಸಹಾಯ ಮಾಡಿ, ಇಲ್ಲಿ ನಾನು ಸಾಯುತ್ತೇನೆ..’; ಸೌದಿಯಿಂದ ಉತ್ತರ ಪ್ರದೇಶದ ವ್ಯಕ್ತಿಯ ಭಾವನಾತ್ಮಕ ಸಂದೇಶ

ಇಚ್ಛೆಗೆ ವಿರುದ್ಧವಾಗಿ ತನ್ನನ್ನು ಇಲ್ಲಿ ಬಂಧಿಸಿಡಲಾಗಿದೆ ಎಂದು ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಹೇಳಿಕೊಂಡಿರುವ ಹೃದಯ ವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತೀಯ ರಾಯಭಾರ ಕಚೇರಿಯು ಗಮನಿಸಿ ಅವರಿಗಾಗಿ ಹುಡುಕಾಟ ಆರಂಭಿಸಿದೆ. ಉದ್ಯೋಗದಾತರು...

ಸತಾರ ವೈದ್ಯೆ ಆತ್ಮಹತ್ಯೆ ಪ್ರಕರಣ: ಟೆಕ್ಕಿ ಬಂಧನ; ಅತ್ಯಾಚಾರ ಆರೋಪಿ ಪೊಲೀಸ್ ಅಧಿಕಾರಿಗಾಗಿ ಹುಡುಕಾಟ

ಸತಾರ ಸರ್ಕಾರಿ ಆಸ್ಪತ್ರೆ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಪ್ರಗತಿಯಲ್ಲಿ, ಮಹಿಳಾ ವೈದ್ಯೆಯ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ ಆರೋಪ ಹೊತ್ತಿರುವ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರನ್ನು ಪೊಲೀಸರು...

ಕರ್ನೂಲ್ ಬಸ್ ದುರಂತ: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 20 ಜನ

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ 20 ಜನರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತಕ್ಕೆ ಚಾಲಕನೇ ನಿರ್ಲಕ್ಷ್ಯವೇ ಕಾರಣ ಎಂದು ಮೋಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಬೆಳಗಿನ...

ಬಂಧನಕ್ಕೊಳಗಾದ ನಾಲ್ಕು ತಿಂಗಳ ನಂತರ ಅಸ್ಸಾಂ ಮಹಿಳೆ ಬಾಂಗ್ಲಾದಲ್ಲಿ ಪತ್ತೆ

ಬಿಬಿಸಿ ತಂಡವು ಬಾಂಗ್ಲಾದೇಶದ ಢಾಕಾದ ಮಿರ್ಪುರಾ ಪ್ರದೇಶದಲ್ಲಿ 68 ವರ್ಷದ ಸಕಿನಾ ಬೇಗಂ ಅವರನ್ನು ಪತ್ತೆ ಮಾಡಿದೆ. ಬಂಗಾಳಿ ಅರ್ಥವಾಗದ ಮತ್ತು ಪೂರ್ವ ಅಸ್ಸಾಂನ ನಲ್ಬರಿ ಜಿಲ್ಲೆಯ ಜನರು ಹೆಚ್ಚಾಗಿ ಮಾತನಾಡುವ ಅಸ್ಸಾಮಿ...

ಕೋಟಾ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ರಾಜಸ್ಥಾನದ ಕೋಟಾದಿಂದ ಮತ್ತೊಂದು ದುರಂತ ಘಟನೆ ವರದಿಯಾಗಿದೆ, ಸರ್ಕಾರಿ ವೈದ್ಯಕೀಯ ಕಾಲೇಜಿನ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಶುಕ್ರವಾರ ಆಕಾಶವಾಣಿ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಪ್ರಾಚಿ ಮೀನಾ ಇತ್ತೀಚಿನ...

ದಲಿತ ಎಂಬ ಕಾರಣಕ್ಕೆ ಬಂಗಲೆಯಿಂದ ಬಲವಂತವಾಗಿ ಹೊರಹಾಕಲಾಗಿದೆ: ಕಾಂಗ್ರೆಸ್ ನಾಯಕ ಉದಿತ್ ರಾಜ್ ಆರೋಪ

ವಿಷಯವು ಸಬ್-ನ್ಯಾಯಾಲಯದಲ್ಲಿದ್ದರೂ, ಅಧಿಕಾರಿಗಳು ತಮ್ಮ ಕುಟುಂಬವನ್ನು ನವದೆಹಲಿಯಲ್ಲಿರುವ ಪಂಡಾರ ಪಾರ್ಕ್ ಬಂಗಲೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಉದಿತ್ ರಾಜ್ ಶುಕ್ರವಾರ ಆರೋಪಿಸಿದ್ದಾರೆ. ಮಾಜಿ ಸಂಸದರ ಪತ್ನಿ, ನಿವೃತ್ತ...

ಛತ್ತೀಸ್‌ಗಢ| 40 ಸಾವಿರ ರೂಪಾಯಿ ನಾಣ್ಯದಲ್ಲಿ ಪಾವತಿಸಿ ಮಗಳಿಗೆ ಸ್ಕೂಟರ್ ಕೊಡಿಸಿದ ರೈತ

ಛತ್ತೀಸ್‌ಗಢದ ಜಶ್‌ಪುರದಲ್ಲಿ, ರೈತನೊಬ್ಬ ತನ್ನ ಮಗಳಿಗಾಗಿ ಹೋಂಡಾ ಆಕ್ಟಿವಾ ಸ್ಕೂಟರ್ ಖರೀದಿಸಿದ್ದಾರೆ. ವಿಶೇಷವೆಂದರೆ, ಅದಕ್ಕಾಗಿ ಅವರು ಈವರೆಗೆ ತಾವು ಉಳಿತಾಯ ಮಾಡಿದ್ದ 40,000 ರೂಪಾಯಿಗಳನ್ನು ನಾಣ್ಯಗಳಲ್ಲಿ ಪಾವತಿಸಿದ್ದಾರೆ. ಕೇಸರಪತ್ ಗ್ರಾಮದಲ್ಲಿ ದಿನಸಿ ಮಾರಾಟ ಮಾಡುವ...

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28ರಂದು ಶಾಂತಿ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಸಬೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು...

ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ...

ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಕೊಂಡರೆ ಇಸ್ರೇಲ್ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಕಳೆದುಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಗುರುವಾರ (ಅ.23) ಪ್ರಕಟಗೊಂಡ ಟೈಮ್ ನಿಯತಕಾಲಿಕೆಯ ಸಂದರ್ಶನದಲ್ಲಿ, "ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಪರಿಣಾಮಗಳು...