Homeಕರ್ನಾಟಕವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

- Advertisement -
- Advertisement -

ಸಂಘಪರಿವಾರದ ಸದಸ್ಯೆಯೊಬ್ಬರು ಮುಸ್ಲಿಮರ ನರಹತ್ಯೆಗೆ ವಿಜಯಪುರ ಜಿಲ್ಲೆಯಲ್ಲಿ ಕರೆ ನೀಡಿರುವ ವಿಡಿಯೊ ವೈರಲ್‌ ಆಗಿದೆ. ಹರಿದ್ವಾರದ ಧರ್ಮ ಸಂಸತ್‌ನಲ್ಲಿ ನರಹತ್ಯೆಗೆ ಕರೆ ನೀಡಲಾಗಿತ್ತು. ಅಂತಹದ್ದೇ ಪ್ರಕರಣ ಈಗ ಕರ್ನಾಟಕದಲ್ಲೂ ನಡೆದಿದೆ ಎಂದು ಆರೋಪಿಸಲಾಗಿದೆ.

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದಾರೆ.

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೆ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡುತ್ತಾರೆ.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದನ್ನು ಕಾಣಬಹುದು. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ).

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವ ಸಂಬಂಧ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಂದಾಗಿ ವಿವಾದ ತೀವ್ರ ಸ್ವರೂಪ ಪಡೆದಿದೆ. ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಕೋಮು ಶಕ್ತಿಗಳು ಪ್ರಚೋದನಕಾರಿಯಾಗಿ ಹೇಳಿಕೆಗಳನ್ನು ನೀಡುತ್ತಿವೆ.

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದಾರೆ. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದಾರೆ.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದಾರೆ. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದಾರೆ.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸರಿಂದ ಕ್ರಮ ಯಾವಾಗ?

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿಗೆ ಸಂಬಂಧಿಸಿದಂತೆ ಒಂದು ಟ್ವೀಟ್‌ ಮಾಡಿದ ಕಾರಣಕ್ಕೆ ನಟ ಚೇತನ್ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಯಿತು. “ಚೇತನ್‌ ಅಹಿಂಸಾ ಅವರು ಕೋಮುಗಳ ನಡುವೆ ಗಲಭೆಗೆ ಪ್ರಚೋದಿಸಿದ್ದಾರೆ, ನ್ಯಾಯಾಂಗದ ಮೇಲೆ ಅಪನಂಬಿಕೆ ಉಂಟು ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಬಹಿರಂಗವಾಗಿ ಒಂದು ಸಮುದಾಯದ ವಿರುದ್ಧ ದ್ವೇಷ ಕಾರುತ್ತಿರುವವರ ಕುರಿತು ಪೊಲೀಸ್ ಇಲಾಖೆ ಯಾವ ಕ್ರಮ ಜರುಗಿಸಿದೆ” ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಮೂಡಿದೆ.

ವಿಜಯಪುರದಲ್ಲಿ ನಡೆದಿರುವ ಸಂಬಂಧ ಯಾವುದಾದರೂ ಕ್ರಮ ಜರುಗಿಸಲಾಗಿದೆ ಎಂಬುದನ್ನು ತಿಳಿಯಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್‌ಕುಮಾರ್‌ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಪೊಲೀಸ್ ವರಿಷ್ಠಾಧಿಕಾರಿಯವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...