Homeಕರ್ನಾಟಕವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

- Advertisement -
- Advertisement -

ಸಂಘಪರಿವಾರದ ಸದಸ್ಯೆಯೊಬ್ಬರು ಮುಸ್ಲಿಮರ ನರಹತ್ಯೆಗೆ ವಿಜಯಪುರ ಜಿಲ್ಲೆಯಲ್ಲಿ ಕರೆ ನೀಡಿರುವ ವಿಡಿಯೊ ವೈರಲ್‌ ಆಗಿದೆ. ಹರಿದ್ವಾರದ ಧರ್ಮ ಸಂಸತ್‌ನಲ್ಲಿ ನರಹತ್ಯೆಗೆ ಕರೆ ನೀಡಲಾಗಿತ್ತು. ಅಂತಹದ್ದೇ ಪ್ರಕರಣ ಈಗ ಕರ್ನಾಟಕದಲ್ಲೂ ನಡೆದಿದೆ ಎಂದು ಆರೋಪಿಸಲಾಗಿದೆ.

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದಾರೆ.

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೆ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡುತ್ತಾರೆ.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದನ್ನು ಕಾಣಬಹುದು. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ).

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವ ಸಂಬಂಧ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಂದಾಗಿ ವಿವಾದ ತೀವ್ರ ಸ್ವರೂಪ ಪಡೆದಿದೆ. ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಕೋಮು ಶಕ್ತಿಗಳು ಪ್ರಚೋದನಕಾರಿಯಾಗಿ ಹೇಳಿಕೆಗಳನ್ನು ನೀಡುತ್ತಿವೆ.

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದಾರೆ. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದಾರೆ.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದಾರೆ. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದಾರೆ.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸರಿಂದ ಕ್ರಮ ಯಾವಾಗ?

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿಗೆ ಸಂಬಂಧಿಸಿದಂತೆ ಒಂದು ಟ್ವೀಟ್‌ ಮಾಡಿದ ಕಾರಣಕ್ಕೆ ನಟ ಚೇತನ್ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಯಿತು. “ಚೇತನ್‌ ಅಹಿಂಸಾ ಅವರು ಕೋಮುಗಳ ನಡುವೆ ಗಲಭೆಗೆ ಪ್ರಚೋದಿಸಿದ್ದಾರೆ, ನ್ಯಾಯಾಂಗದ ಮೇಲೆ ಅಪನಂಬಿಕೆ ಉಂಟು ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಬಹಿರಂಗವಾಗಿ ಒಂದು ಸಮುದಾಯದ ವಿರುದ್ಧ ದ್ವೇಷ ಕಾರುತ್ತಿರುವವರ ಕುರಿತು ಪೊಲೀಸ್ ಇಲಾಖೆ ಯಾವ ಕ್ರಮ ಜರುಗಿಸಿದೆ” ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಮೂಡಿದೆ.

ವಿಜಯಪುರದಲ್ಲಿ ನಡೆದಿರುವ ಸಂಬಂಧ ಯಾವುದಾದರೂ ಕ್ರಮ ಜರುಗಿಸಲಾಗಿದೆ ಎಂಬುದನ್ನು ತಿಳಿಯಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್‌ಕುಮಾರ್‌ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಪೊಲೀಸ್ ವರಿಷ್ಠಾಧಿಕಾರಿಯವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...