Homeಕರ್ನಾಟಕವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

- Advertisement -
- Advertisement -

ಸಂಘಪರಿವಾರದ ಸದಸ್ಯೆಯೊಬ್ಬರು ಮುಸ್ಲಿಮರ ನರಹತ್ಯೆಗೆ ವಿಜಯಪುರ ಜಿಲ್ಲೆಯಲ್ಲಿ ಕರೆ ನೀಡಿರುವ ವಿಡಿಯೊ ವೈರಲ್‌ ಆಗಿದೆ. ಹರಿದ್ವಾರದ ಧರ್ಮ ಸಂಸತ್‌ನಲ್ಲಿ ನರಹತ್ಯೆಗೆ ಕರೆ ನೀಡಲಾಗಿತ್ತು. ಅಂತಹದ್ದೇ ಪ್ರಕರಣ ಈಗ ಕರ್ನಾಟಕದಲ್ಲೂ ನಡೆದಿದೆ ಎಂದು ಆರೋಪಿಸಲಾಗಿದೆ.

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದಾರೆ.

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೆ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡುತ್ತಾರೆ.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದನ್ನು ಕಾಣಬಹುದು. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ).

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವ ಸಂಬಂಧ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಂದಾಗಿ ವಿವಾದ ತೀವ್ರ ಸ್ವರೂಪ ಪಡೆದಿದೆ. ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಕೋಮು ಶಕ್ತಿಗಳು ಪ್ರಚೋದನಕಾರಿಯಾಗಿ ಹೇಳಿಕೆಗಳನ್ನು ನೀಡುತ್ತಿವೆ.

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದಾರೆ. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದಾರೆ.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದಾರೆ. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದಾರೆ.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸರಿಂದ ಕ್ರಮ ಯಾವಾಗ?

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿಗೆ ಸಂಬಂಧಿಸಿದಂತೆ ಒಂದು ಟ್ವೀಟ್‌ ಮಾಡಿದ ಕಾರಣಕ್ಕೆ ನಟ ಚೇತನ್ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಯಿತು. “ಚೇತನ್‌ ಅಹಿಂಸಾ ಅವರು ಕೋಮುಗಳ ನಡುವೆ ಗಲಭೆಗೆ ಪ್ರಚೋದಿಸಿದ್ದಾರೆ, ನ್ಯಾಯಾಂಗದ ಮೇಲೆ ಅಪನಂಬಿಕೆ ಉಂಟು ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಬಹಿರಂಗವಾಗಿ ಒಂದು ಸಮುದಾಯದ ವಿರುದ್ಧ ದ್ವೇಷ ಕಾರುತ್ತಿರುವವರ ಕುರಿತು ಪೊಲೀಸ್ ಇಲಾಖೆ ಯಾವ ಕ್ರಮ ಜರುಗಿಸಿದೆ” ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಮೂಡಿದೆ.

ವಿಜಯಪುರದಲ್ಲಿ ನಡೆದಿರುವ ಸಂಬಂಧ ಯಾವುದಾದರೂ ಕ್ರಮ ಜರುಗಿಸಲಾಗಿದೆ ಎಂಬುದನ್ನು ತಿಳಿಯಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್‌ಕುಮಾರ್‌ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಪೊಲೀಸ್ ವರಿಷ್ಠಾಧಿಕಾರಿಯವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....