Homeಕರ್ನಾಟಕವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

- Advertisement -
- Advertisement -

ಹಿಜಾಬ್‌ ಹಾಗೂ ಕೇಸರಿ ಶಾಲು ಧರಿಸುವ ವಿವಾದ ಬೇರೆ ಬೇರೆ ರೂಪುಗಳನ್ನು ಪಡೆದುಕೊಳ್ಳುತ್ತಿದೆ. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಜನರು ತಪ್ಪಾಗಿ ಅರ್ಥ ಮಾಡಿಕೊಂಡಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ.

ಮಧ್ಯಂತರ ಆದೇಶ ಇಡೀ ರಾಜ್ಯದ ಎಲ್ಲ ಶಾಲಾ, ಕಾಲೇಜಿಗೆ ಅನ್ವಯವಾಗುತ್ತದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸುತ್ತಿರುವ ವಿದ್ಯಮಾನಗಳು ರಾಜ್ಯದ ಹಲವೆಡೆ ಕಂಡು ಬರುತ್ತಿವೆ. ಜೊತೆಗೆ ವಿಜಯಪುರ ಜಿಲ್ಲೆಯಲ್ಲಿ ತಿಲಕ ಧರಿಸಿ ಬಂದ ವಿದ್ಯಾರ್ಥಿಗೂ ಪ್ರವೇಶ ನಿರಾಕರಿಸಿರುವ ಘಟನೆ ನಡೆದಿದೆ.

ತಿಲಕ ಧರಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಪ್ರವೇಶ ನಿರಾಕರಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.

ಮೂಲಗಳ ಪ್ರಕಾರ, ಕಾಲೇಜು ಅಧಿಕಾರಿಗಳು ಕಾಲೇಜಿಗೆ ಪ್ರವೇಶಿಸುವ ಮೊದಲು ತಿಲಕವನ್ನು ತೆಗೆಯುವಂತೆ ವಿದ್ಯಾರ್ಥಿಗೆ  ಸೂಚಿಸಲಾಯಿತು. ವಿದ್ಯಾರ್ಥಿ ನಿರಾಕರಿಸಿದಾಗ, ಮನೆಗೆ ವಾಪಸ್‌ ಹೋಗುವಂತೆ ತಿಳಿಸಲಾಯಿತು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಉಪನ್ಯಾಸಕರ ಜತೆ ಮಾತಿನ ಚಕಮಕಿ ನಡೆಸಿದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಭಜರಂಗದಳದ ಕಾರ್ಯಕರ್ತರು ಸೇರಿದಂತೆ ವಿವಿಧ ಹಿಂದುತ್ವ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಹೈಕೋರ್ಟ್ ಮಧ್ಯಂತರ ಆದೇಶವು ಧಾರ್ಮಿಕ ಬಟ್ಟೆಗಳನ್ನು ಧರಿಸುವುದನ್ನು ಮಾತ್ರ ನಿರ್ಬಂಧಿಸಿದೆ. ತಿಲಕವನ್ನು ಧರಿಸುವುದನ್ನು ನಿರ್ಬಂಧಿಸಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದರು. ಕೂಡಲೇ ಕಾಲೇಜಿಗೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿ, “ಸಿಂಧೂರವು ಧಾರ್ಮಿಕ ಸಂಕೇತವಲ್ಲ. ಇದು ದೇಶದ ಸಂಸ್ಕೃತಿಯ ಭಾಗವಾಗಿದೆ. ಧಾರ್ಮಿಕ ಚಿಹ್ನೆಗಳ ಕುರಿತು ಶಿಕ್ಷಣ ಇಲಾಖೆಯ ಸುತ್ತೋಲೆಗೆ ಅನುಗುಣವಾಗಿ ಇದನ್ನು ನಿಷೇಧಿಸಲಾಗುವುದಿಲ್ಲ” ಎಂದು ‘ದಿ ಹಿಂದೂ’ಗೆ ತಿಳಿಸಿರುವುದಾಗಿ ಪತ್ರಕರ್ತ ರಿಷಿಕೇಶ್‌ ಬಹದ್ದೂರ್‌ ದೇಸಾಯಿ ಟ್ವೀಟ್ ಮಾಡಿದ್ದಾರೆ.

ಕೋರ್ಟ್ ಆದೇಶ ಹೇಳುವುದೇನು?

ಈಗಾಗಲೇ ಕಾಲೇಜು ಅಭಿವೃದ್ಧಿ ಸಮಿತಿ ವಸ್ತ್ರ ಸಂಹಿತೆಯನ್ನು ಸೂಚಿಸಿರುವಲ್ಲಿ ಮಾತ್ರ (ಅಂದರೆ ವಿವಾದಕ್ಕೆ ಒಳಗಾಗಿರುವ ಕಾಲೇಜುಗಳಲ್ಲಿ ಮಾತ್ರ) ಹೈಕೋರ್ಟ್‌ನ ಮಧ್ಯಂತರ ಆದೇಶ ಅನ್ವಯವಾಗುತ್ತದೆ. ಆ ಪ್ರಕಾರ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸುವಂತಿಲ್ಲ.

ಆದರೆ ಈ ಕುರಿತು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಜೊತೆಗೆ ಶಿಕ್ಷಣ ಇಲಾಖೆಯೂ ಆದೇಶವನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಕೇಸರಿ ಶಾಲು, ಹಿಬಾಬ್‌ ಥರದ ಧಾರ್ಮಿಕವನ್ನು ಧರಿಸದಂತೆ ಕೋರ್ಟ್ ಸೂಚಿಸಿರುವುದು ಕರ್ನಾಟಕದ ಎಲ್ಲ ಶಾಲಾ, ಕಾಲೇಜುಗಳಿಗೂ ಅನ್ವಯವಾಗುವುದಿಲ್ಲ ಎಂಬುದು ಸ್ಪಷ್ಟ.


ಇದನ್ನೂ ಓದಿರಿ: ಸಮಾಜಘಾತುಕ ಶಕ್ತಿಗಳು ಹಿಜಾಬ್‌ ಧರಿಸದಂತೆ ನಿರ್ಬಂಧ ವಿಧಿಸಿದರೆ ಅವರ ವಿರುದ್ಧ FIR ದಾಖಲಿಸಿ: ಮುಖ್ಯ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...