Homeಕರ್ನಾಟಕವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

- Advertisement -
- Advertisement -

ಹಿಜಾಬ್‌ ಹಾಗೂ ಕೇಸರಿ ಶಾಲು ಧರಿಸುವ ವಿವಾದ ಬೇರೆ ಬೇರೆ ರೂಪುಗಳನ್ನು ಪಡೆದುಕೊಳ್ಳುತ್ತಿದೆ. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಜನರು ತಪ್ಪಾಗಿ ಅರ್ಥ ಮಾಡಿಕೊಂಡಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ.

ಮಧ್ಯಂತರ ಆದೇಶ ಇಡೀ ರಾಜ್ಯದ ಎಲ್ಲ ಶಾಲಾ, ಕಾಲೇಜಿಗೆ ಅನ್ವಯವಾಗುತ್ತದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸುತ್ತಿರುವ ವಿದ್ಯಮಾನಗಳು ರಾಜ್ಯದ ಹಲವೆಡೆ ಕಂಡು ಬರುತ್ತಿವೆ. ಜೊತೆಗೆ ವಿಜಯಪುರ ಜಿಲ್ಲೆಯಲ್ಲಿ ತಿಲಕ ಧರಿಸಿ ಬಂದ ವಿದ್ಯಾರ್ಥಿಗೂ ಪ್ರವೇಶ ನಿರಾಕರಿಸಿರುವ ಘಟನೆ ನಡೆದಿದೆ.

ತಿಲಕ ಧರಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಪ್ರವೇಶ ನಿರಾಕರಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.

ಮೂಲಗಳ ಪ್ರಕಾರ, ಕಾಲೇಜು ಅಧಿಕಾರಿಗಳು ಕಾಲೇಜಿಗೆ ಪ್ರವೇಶಿಸುವ ಮೊದಲು ತಿಲಕವನ್ನು ತೆಗೆಯುವಂತೆ ವಿದ್ಯಾರ್ಥಿಗೆ  ಸೂಚಿಸಲಾಯಿತು. ವಿದ್ಯಾರ್ಥಿ ನಿರಾಕರಿಸಿದಾಗ, ಮನೆಗೆ ವಾಪಸ್‌ ಹೋಗುವಂತೆ ತಿಳಿಸಲಾಯಿತು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಉಪನ್ಯಾಸಕರ ಜತೆ ಮಾತಿನ ಚಕಮಕಿ ನಡೆಸಿದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಭಜರಂಗದಳದ ಕಾರ್ಯಕರ್ತರು ಸೇರಿದಂತೆ ವಿವಿಧ ಹಿಂದುತ್ವ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಹೈಕೋರ್ಟ್ ಮಧ್ಯಂತರ ಆದೇಶವು ಧಾರ್ಮಿಕ ಬಟ್ಟೆಗಳನ್ನು ಧರಿಸುವುದನ್ನು ಮಾತ್ರ ನಿರ್ಬಂಧಿಸಿದೆ. ತಿಲಕವನ್ನು ಧರಿಸುವುದನ್ನು ನಿರ್ಬಂಧಿಸಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದರು. ಕೂಡಲೇ ಕಾಲೇಜಿಗೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿ, “ಸಿಂಧೂರವು ಧಾರ್ಮಿಕ ಸಂಕೇತವಲ್ಲ. ಇದು ದೇಶದ ಸಂಸ್ಕೃತಿಯ ಭಾಗವಾಗಿದೆ. ಧಾರ್ಮಿಕ ಚಿಹ್ನೆಗಳ ಕುರಿತು ಶಿಕ್ಷಣ ಇಲಾಖೆಯ ಸುತ್ತೋಲೆಗೆ ಅನುಗುಣವಾಗಿ ಇದನ್ನು ನಿಷೇಧಿಸಲಾಗುವುದಿಲ್ಲ” ಎಂದು ‘ದಿ ಹಿಂದೂ’ಗೆ ತಿಳಿಸಿರುವುದಾಗಿ ಪತ್ರಕರ್ತ ರಿಷಿಕೇಶ್‌ ಬಹದ್ದೂರ್‌ ದೇಸಾಯಿ ಟ್ವೀಟ್ ಮಾಡಿದ್ದಾರೆ.

ಕೋರ್ಟ್ ಆದೇಶ ಹೇಳುವುದೇನು?

ಈಗಾಗಲೇ ಕಾಲೇಜು ಅಭಿವೃದ್ಧಿ ಸಮಿತಿ ವಸ್ತ್ರ ಸಂಹಿತೆಯನ್ನು ಸೂಚಿಸಿರುವಲ್ಲಿ ಮಾತ್ರ (ಅಂದರೆ ವಿವಾದಕ್ಕೆ ಒಳಗಾಗಿರುವ ಕಾಲೇಜುಗಳಲ್ಲಿ ಮಾತ್ರ) ಹೈಕೋರ್ಟ್‌ನ ಮಧ್ಯಂತರ ಆದೇಶ ಅನ್ವಯವಾಗುತ್ತದೆ. ಆ ಪ್ರಕಾರ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸುವಂತಿಲ್ಲ.

ಆದರೆ ಈ ಕುರಿತು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಜೊತೆಗೆ ಶಿಕ್ಷಣ ಇಲಾಖೆಯೂ ಆದೇಶವನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಕೇಸರಿ ಶಾಲು, ಹಿಬಾಬ್‌ ಥರದ ಧಾರ್ಮಿಕವನ್ನು ಧರಿಸದಂತೆ ಕೋರ್ಟ್ ಸೂಚಿಸಿರುವುದು ಕರ್ನಾಟಕದ ಎಲ್ಲ ಶಾಲಾ, ಕಾಲೇಜುಗಳಿಗೂ ಅನ್ವಯವಾಗುವುದಿಲ್ಲ ಎಂಬುದು ಸ್ಪಷ್ಟ.


ಇದನ್ನೂ ಓದಿರಿ: ಸಮಾಜಘಾತುಕ ಶಕ್ತಿಗಳು ಹಿಜಾಬ್‌ ಧರಿಸದಂತೆ ನಿರ್ಬಂಧ ವಿಧಿಸಿದರೆ ಅವರ ವಿರುದ್ಧ FIR ದಾಖಲಿಸಿ: ಮುಖ್ಯ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...