Homeಕರ್ನಾಟಕವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

- Advertisement -
- Advertisement -

ಹಿಜಾಬ್‌ ಹಾಗೂ ಕೇಸರಿ ಶಾಲು ಧರಿಸುವ ವಿವಾದ ಬೇರೆ ಬೇರೆ ರೂಪುಗಳನ್ನು ಪಡೆದುಕೊಳ್ಳುತ್ತಿದೆ. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಜನರು ತಪ್ಪಾಗಿ ಅರ್ಥ ಮಾಡಿಕೊಂಡಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ.

ಮಧ್ಯಂತರ ಆದೇಶ ಇಡೀ ರಾಜ್ಯದ ಎಲ್ಲ ಶಾಲಾ, ಕಾಲೇಜಿಗೆ ಅನ್ವಯವಾಗುತ್ತದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸುತ್ತಿರುವ ವಿದ್ಯಮಾನಗಳು ರಾಜ್ಯದ ಹಲವೆಡೆ ಕಂಡು ಬರುತ್ತಿವೆ. ಜೊತೆಗೆ ವಿಜಯಪುರ ಜಿಲ್ಲೆಯಲ್ಲಿ ತಿಲಕ ಧರಿಸಿ ಬಂದ ವಿದ್ಯಾರ್ಥಿಗೂ ಪ್ರವೇಶ ನಿರಾಕರಿಸಿರುವ ಘಟನೆ ನಡೆದಿದೆ.

ತಿಲಕ ಧರಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಪ್ರವೇಶ ನಿರಾಕರಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.

ಮೂಲಗಳ ಪ್ರಕಾರ, ಕಾಲೇಜು ಅಧಿಕಾರಿಗಳು ಕಾಲೇಜಿಗೆ ಪ್ರವೇಶಿಸುವ ಮೊದಲು ತಿಲಕವನ್ನು ತೆಗೆಯುವಂತೆ ವಿದ್ಯಾರ್ಥಿಗೆ  ಸೂಚಿಸಲಾಯಿತು. ವಿದ್ಯಾರ್ಥಿ ನಿರಾಕರಿಸಿದಾಗ, ಮನೆಗೆ ವಾಪಸ್‌ ಹೋಗುವಂತೆ ತಿಳಿಸಲಾಯಿತು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಉಪನ್ಯಾಸಕರ ಜತೆ ಮಾತಿನ ಚಕಮಕಿ ನಡೆಸಿದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಭಜರಂಗದಳದ ಕಾರ್ಯಕರ್ತರು ಸೇರಿದಂತೆ ವಿವಿಧ ಹಿಂದುತ್ವ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಹೈಕೋರ್ಟ್ ಮಧ್ಯಂತರ ಆದೇಶವು ಧಾರ್ಮಿಕ ಬಟ್ಟೆಗಳನ್ನು ಧರಿಸುವುದನ್ನು ಮಾತ್ರ ನಿರ್ಬಂಧಿಸಿದೆ. ತಿಲಕವನ್ನು ಧರಿಸುವುದನ್ನು ನಿರ್ಬಂಧಿಸಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದರು. ಕೂಡಲೇ ಕಾಲೇಜಿಗೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿ, “ಸಿಂಧೂರವು ಧಾರ್ಮಿಕ ಸಂಕೇತವಲ್ಲ. ಇದು ದೇಶದ ಸಂಸ್ಕೃತಿಯ ಭಾಗವಾಗಿದೆ. ಧಾರ್ಮಿಕ ಚಿಹ್ನೆಗಳ ಕುರಿತು ಶಿಕ್ಷಣ ಇಲಾಖೆಯ ಸುತ್ತೋಲೆಗೆ ಅನುಗುಣವಾಗಿ ಇದನ್ನು ನಿಷೇಧಿಸಲಾಗುವುದಿಲ್ಲ” ಎಂದು ‘ದಿ ಹಿಂದೂ’ಗೆ ತಿಳಿಸಿರುವುದಾಗಿ ಪತ್ರಕರ್ತ ರಿಷಿಕೇಶ್‌ ಬಹದ್ದೂರ್‌ ದೇಸಾಯಿ ಟ್ವೀಟ್ ಮಾಡಿದ್ದಾರೆ.

ಕೋರ್ಟ್ ಆದೇಶ ಹೇಳುವುದೇನು?

ಈಗಾಗಲೇ ಕಾಲೇಜು ಅಭಿವೃದ್ಧಿ ಸಮಿತಿ ವಸ್ತ್ರ ಸಂಹಿತೆಯನ್ನು ಸೂಚಿಸಿರುವಲ್ಲಿ ಮಾತ್ರ (ಅಂದರೆ ವಿವಾದಕ್ಕೆ ಒಳಗಾಗಿರುವ ಕಾಲೇಜುಗಳಲ್ಲಿ ಮಾತ್ರ) ಹೈಕೋರ್ಟ್‌ನ ಮಧ್ಯಂತರ ಆದೇಶ ಅನ್ವಯವಾಗುತ್ತದೆ. ಆ ಪ್ರಕಾರ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸುವಂತಿಲ್ಲ.

ಆದರೆ ಈ ಕುರಿತು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಜೊತೆಗೆ ಶಿಕ್ಷಣ ಇಲಾಖೆಯೂ ಆದೇಶವನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಕೇಸರಿ ಶಾಲು, ಹಿಬಾಬ್‌ ಥರದ ಧಾರ್ಮಿಕವನ್ನು ಧರಿಸದಂತೆ ಕೋರ್ಟ್ ಸೂಚಿಸಿರುವುದು ಕರ್ನಾಟಕದ ಎಲ್ಲ ಶಾಲಾ, ಕಾಲೇಜುಗಳಿಗೂ ಅನ್ವಯವಾಗುವುದಿಲ್ಲ ಎಂಬುದು ಸ್ಪಷ್ಟ.


ಇದನ್ನೂ ಓದಿರಿ: ಸಮಾಜಘಾತುಕ ಶಕ್ತಿಗಳು ಹಿಜಾಬ್‌ ಧರಿಸದಂತೆ ನಿರ್ಬಂಧ ವಿಧಿಸಿದರೆ ಅವರ ವಿರುದ್ಧ FIR ದಾಖಲಿಸಿ: ಮುಖ್ಯ ನ್ಯಾಯಮೂರ್ತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...