Homeಕರ್ನಾಟಕವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

- Advertisement -
- Advertisement -

ಹಿಜಾಬ್‌ ಹಾಗೂ ಕೇಸರಿ ಶಾಲು ಧರಿಸುವ ವಿವಾದ ಬೇರೆ ಬೇರೆ ರೂಪುಗಳನ್ನು ಪಡೆದುಕೊಳ್ಳುತ್ತಿದೆ. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಜನರು ತಪ್ಪಾಗಿ ಅರ್ಥ ಮಾಡಿಕೊಂಡಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ.

ಮಧ್ಯಂತರ ಆದೇಶ ಇಡೀ ರಾಜ್ಯದ ಎಲ್ಲ ಶಾಲಾ, ಕಾಲೇಜಿಗೆ ಅನ್ವಯವಾಗುತ್ತದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸುತ್ತಿರುವ ವಿದ್ಯಮಾನಗಳು ರಾಜ್ಯದ ಹಲವೆಡೆ ಕಂಡು ಬರುತ್ತಿವೆ. ಜೊತೆಗೆ ವಿಜಯಪುರ ಜಿಲ್ಲೆಯಲ್ಲಿ ತಿಲಕ ಧರಿಸಿ ಬಂದ ವಿದ್ಯಾರ್ಥಿಗೂ ಪ್ರವೇಶ ನಿರಾಕರಿಸಿರುವ ಘಟನೆ ನಡೆದಿದೆ.

ತಿಲಕ ಧರಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಪ್ರವೇಶ ನಿರಾಕರಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.

ಮೂಲಗಳ ಪ್ರಕಾರ, ಕಾಲೇಜು ಅಧಿಕಾರಿಗಳು ಕಾಲೇಜಿಗೆ ಪ್ರವೇಶಿಸುವ ಮೊದಲು ತಿಲಕವನ್ನು ತೆಗೆಯುವಂತೆ ವಿದ್ಯಾರ್ಥಿಗೆ  ಸೂಚಿಸಲಾಯಿತು. ವಿದ್ಯಾರ್ಥಿ ನಿರಾಕರಿಸಿದಾಗ, ಮನೆಗೆ ವಾಪಸ್‌ ಹೋಗುವಂತೆ ತಿಳಿಸಲಾಯಿತು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಉಪನ್ಯಾಸಕರ ಜತೆ ಮಾತಿನ ಚಕಮಕಿ ನಡೆಸಿದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಭಜರಂಗದಳದ ಕಾರ್ಯಕರ್ತರು ಸೇರಿದಂತೆ ವಿವಿಧ ಹಿಂದುತ್ವ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಹೈಕೋರ್ಟ್ ಮಧ್ಯಂತರ ಆದೇಶವು ಧಾರ್ಮಿಕ ಬಟ್ಟೆಗಳನ್ನು ಧರಿಸುವುದನ್ನು ಮಾತ್ರ ನಿರ್ಬಂಧಿಸಿದೆ. ತಿಲಕವನ್ನು ಧರಿಸುವುದನ್ನು ನಿರ್ಬಂಧಿಸಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದರು. ಕೂಡಲೇ ಕಾಲೇಜಿಗೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿ, “ಸಿಂಧೂರವು ಧಾರ್ಮಿಕ ಸಂಕೇತವಲ್ಲ. ಇದು ದೇಶದ ಸಂಸ್ಕೃತಿಯ ಭಾಗವಾಗಿದೆ. ಧಾರ್ಮಿಕ ಚಿಹ್ನೆಗಳ ಕುರಿತು ಶಿಕ್ಷಣ ಇಲಾಖೆಯ ಸುತ್ತೋಲೆಗೆ ಅನುಗುಣವಾಗಿ ಇದನ್ನು ನಿಷೇಧಿಸಲಾಗುವುದಿಲ್ಲ” ಎಂದು ‘ದಿ ಹಿಂದೂ’ಗೆ ತಿಳಿಸಿರುವುದಾಗಿ ಪತ್ರಕರ್ತ ರಿಷಿಕೇಶ್‌ ಬಹದ್ದೂರ್‌ ದೇಸಾಯಿ ಟ್ವೀಟ್ ಮಾಡಿದ್ದಾರೆ.

ಕೋರ್ಟ್ ಆದೇಶ ಹೇಳುವುದೇನು?

ಈಗಾಗಲೇ ಕಾಲೇಜು ಅಭಿವೃದ್ಧಿ ಸಮಿತಿ ವಸ್ತ್ರ ಸಂಹಿತೆಯನ್ನು ಸೂಚಿಸಿರುವಲ್ಲಿ ಮಾತ್ರ (ಅಂದರೆ ವಿವಾದಕ್ಕೆ ಒಳಗಾಗಿರುವ ಕಾಲೇಜುಗಳಲ್ಲಿ ಮಾತ್ರ) ಹೈಕೋರ್ಟ್‌ನ ಮಧ್ಯಂತರ ಆದೇಶ ಅನ್ವಯವಾಗುತ್ತದೆ. ಆ ಪ್ರಕಾರ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸುವಂತಿಲ್ಲ.

ಆದರೆ ಈ ಕುರಿತು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಜೊತೆಗೆ ಶಿಕ್ಷಣ ಇಲಾಖೆಯೂ ಆದೇಶವನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಕೇಸರಿ ಶಾಲು, ಹಿಬಾಬ್‌ ಥರದ ಧಾರ್ಮಿಕವನ್ನು ಧರಿಸದಂತೆ ಕೋರ್ಟ್ ಸೂಚಿಸಿರುವುದು ಕರ್ನಾಟಕದ ಎಲ್ಲ ಶಾಲಾ, ಕಾಲೇಜುಗಳಿಗೂ ಅನ್ವಯವಾಗುವುದಿಲ್ಲ ಎಂಬುದು ಸ್ಪಷ್ಟ.


ಇದನ್ನೂ ಓದಿರಿ: ಸಮಾಜಘಾತುಕ ಶಕ್ತಿಗಳು ಹಿಜಾಬ್‌ ಧರಿಸದಂತೆ ನಿರ್ಬಂಧ ವಿಧಿಸಿದರೆ ಅವರ ವಿರುದ್ಧ FIR ದಾಖಲಿಸಿ: ಮುಖ್ಯ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...