Homeಕರ್ನಾಟಕವಿಜಯಪುರ: ಮತ ನೀಡಿಲ್ಲವೆಂದು ಬಿಜೆಪಿ ನಾಯಕನ ಬೆಂಬಲಿಗರಿಂದ ಹಲ್ಲೆ

ವಿಜಯಪುರ: ಮತ ನೀಡಿಲ್ಲವೆಂದು ಬಿಜೆಪಿ ನಾಯಕನ ಬೆಂಬಲಿಗರಿಂದ ಹಲ್ಲೆ

- Advertisement -
- Advertisement -

ವಿಜಯಪುರ ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸದ ಕಾರಣಕ್ಕೆ ಆತನ ಬೆಂಬಲಿಗರು ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ದೇವಕಾಂತ್ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬಿಜೆಪಿ ಮೊದಲ ಬಾರಿಗೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 35 ವಾರ್ಡಗಳಿಗೆ ನಡೆದ ಚುನಾವಣೆಯಲ್ಲಿ 17 ವಾರ್ಡ್‌ಗಳಲ್ಲಿ ಬಿಜೆಪಿ , 10 ವಾರ್ಡ್‌ಗಳಲ್ಲಿ ಕಾಂಗ್ರೆಸ್, 1 ವಾರ್ಡ್‌ನಲ್ಲಿ ಜೆಡಿಎಸ್, 2 ವಾರ್ಡ್‌ಗಳಲ್ಲಿ ಆಲ್‌ ಇಂಡಿಯಾ ಇತ್ತಿಹಾದುಲ್ ಮುಸ್ಲಿಮೀನ್‌, 5 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಬಿಜೆಪಿ ನಾಯಕ ರಾಹುಲ್ ಔರಂಗಾಬಾದ್ ಅವರ ಬೆಂಬಲಿಗರು ತನಗೆ ಹಲ್ಲೆ ನಡೆಸಿದ್ದಾರೆ ಎಂದು ದೇವಕಾಂತ್‌ ಅವರು ಹೇಳಿದ್ದಾರೆ. ಚುನಾವಣೆಯಲ್ಲಿ ರಾಹುಲ್ ಅವರು ಸೋತ ನಂತರ ಅವರ ಬೆಂಬಲಿಗರು ತನ್ನನ್ನು ಗುರಿಯಾಗಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ವಿಡಿಯೊದಲ್ಲಿ ಮಾತನಾಡಿರುವ ದೇವಕಾಂತ್ ಅವರು, ‘‘ನನಗೆ ಹೃದಯ ಸರ್ಜರಿ ಆಗಿದೆ ಎಂದು ಹೇಳಿದ್ರೂ ಸುಮಾರು 6 ರಿಂದ 7 ಮಂದಿ ನನಗೆ ತೀವ್ರ ಹಲ್ಲೆ ನಡೆಸಿದ್ದಾರೆ. ಅವರಿಗೆ ನನ್ನ ವಿರುದ್ಧ ಯಾವುದೆ ಹಳೆಯ ವೈಷಮ್ಯವಿರಲಿಲ್ಲ. ಆದರೆ ಅವರ ನಾಯಕನ ವಿರುದ್ಧ ಗೆದ್ದು ಬಂದ ಅಭ್ಯರ್ಥಿ ಮನೆಗೆ ಬಂದು ನನ್ನ ತಂದೆಯ ಕಾಲಿಗೆ ಬಿದ್ದು ಆಶಿರ್ವಾದ ತೆಗೆದುಕೊಂಡಿದ್ದರು. ಹೀಗಾಗಿ ಅವರಿಗೆ ಓಟ್‌ ಹಾಕಿಲ್ಲ ಎಂದು ತಿಳಿದು ಅವರ ಕಡೆಯವರು ಹಲ್ಲೆ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

ಪಾಲಿಕೆಯ ಅಧಿಕಾರದ ಹಿಡಿಯಲು ಒಟ್ಟು 18 ಸದಸ್ಯರ ಬೆಂಬಲ ಬೇಕಾಗಿದ್ದು, ಬಿಜೆಪಿ 17 ವಾರ್ಡಗಳಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಪಕ್ಷೇತರ ಅಭ್ಯರ್ಥಿಯ ಬೆಂಬಲ ಪಡೆದು ಬಿಜೆಪಿ ಅಧಿಕಾರ ಹಿಡಿಯುವುದು ನಿಚ್ಚಳವಾಗಿದೆ. ಪಾಲಿಕೆಗೆ ಅಕ್ಟೋಬರ್‌ 28 ರಂದು ಚುನಾವಣೆ ನಡೆದಿದ್ದು, ಒಟ್ಟು 174 ಅಭ್ಯರ್ಥಿಗಳು ಸ್ಪರ್ಧೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...