Homeಕರ್ನಾಟಕವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

- Advertisement -
- Advertisement -

ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಆರೋಪದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯೆಯ ವಿರುದ್ಧ ವಿಜಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಸ್ಲಿಮರ ವಿರುದ್ಧ ವಿಶೇಷವಾಗಿ ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಆರು ವಿದ್ಯಾರ್ಥಿನಿಯರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಪೂಜಾ ಕರೆ ನೀಡಿದ್ದರು. ಜೊತೆಗೆ 60,000 ಮುಸ್ಲಿಮರನ್ನು ಕೊಲ್ಲುವುದಾಗಿ ಪೂಜಾ ಹೇಳಿದ್ದಾರೆಂಬ ವಿಡಿಯೊವನ್ನು ಹಲವಾರು ವೆರಿಫೈಡ್‌ ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದರು.

ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 504 (ಶಾಂತಿ ಕದಡುವ ಉದ್ದೇಶ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ತಿಳಿಸಿದ್ದಾರೆ.

ಪೂಜಾ ಬಂಧನವಾಗಿಲ್ಲ. ‘ಸಕಾಲದಲ್ಲಿ ಅವರನ್ನು ಬಂಧಿಸಲಾಗುವುದು’ ಎಂದು ಎಸ್‌ಪಿ ತಿಳಿಸಿದ್ದಾರೆ. ಆರೋಪಿಯ ವಯಸ್ಸು ಮತ್ತು ಇತರ ವಿವರಗಳು ಲಭ್ಯವಾಗಿಲ್ಲ. ಅವುಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೂಜಾ ವೀರಶೆಟ್ಟಿಯವರ ಭಾಷಣಕ್ಕೆ ಸಂಬಂಧಿಸಿದಂತೆ ವಿರೋಧಗಳು ವ್ಯಕ್ತವಾಗುತ್ತಿದ್ದರೂ ಪ್ರಕರಣ ದಾಖಲಾಗಿರಲಿಲ್ಲ. ಈ ಸಂಬಂಧ  ‘ನಾನುಗೌರಿ.ಕಾಂ’ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ಕುಮಾರ್‌ ಅವರನ್ನು ಸಂಪರ್ಕಿಸಿತ್ತು.

“ಯಾರೂ ಇದುವರೆಗೆ ದೂರು ನೀಡಿಲ್ಲ. ಕಾನೂನು ತಜ್ಞರ ಬಳಿ ಮಾತನಾಡುತ್ತಿದ್ದೇವೆ. ಅವರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಎಸ್‌ಪಿ ತಿಳಿಸಿದ್ದರು.

“ಸುಮೊಟೊ ಪ್ರಕರಣವಾದರೂ ದಾಖಲಾಗಬಹುದಿತ್ತು. ಕ್ಷುಲ್ಲಕ ಟ್ವೀಟ್‌ವೊಂದಕ್ಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಮೇಲೆ ಪ್ರಕರಣ ದಾಖಲಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ ನೀಡಲಾಗಿದೆ. ಹರಿದ್ವಾರದಲ್ಲಿ ನರಹತ್ಯೆಗೆ ಕರೆ ನೀಡಿದ ಬಳಿಕ ಕರ್ನಾಟಕದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಘನತೆ ಹಾಳಾಗುತ್ತಿದೆಯಲ್ಲ” ಎಂದು ಪ್ರಶ್ನಿಸಿದಾಗ, “ಈ ಕುರಿತು ತನಿಖೆಯಾಗುತ್ತಿದೆ. ತಜ್ಞರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಆನಂದ್‌ಕುಮಾರ್‌ ಹೇಳಿದ್ದರು.

ಏನಿದು ಪ್ರಕರಣ?

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದರು.

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೇ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡಿದ್ದರು.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ.

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದರು. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದರು.

 

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದರು.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದರು. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದರು.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...