Homeಕರ್ನಾಟಕವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

- Advertisement -
- Advertisement -

ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಆರೋಪದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯೆಯ ವಿರುದ್ಧ ವಿಜಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಸ್ಲಿಮರ ವಿರುದ್ಧ ವಿಶೇಷವಾಗಿ ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಆರು ವಿದ್ಯಾರ್ಥಿನಿಯರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಪೂಜಾ ಕರೆ ನೀಡಿದ್ದರು. ಜೊತೆಗೆ 60,000 ಮುಸ್ಲಿಮರನ್ನು ಕೊಲ್ಲುವುದಾಗಿ ಪೂಜಾ ಹೇಳಿದ್ದಾರೆಂಬ ವಿಡಿಯೊವನ್ನು ಹಲವಾರು ವೆರಿಫೈಡ್‌ ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದರು.

ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 504 (ಶಾಂತಿ ಕದಡುವ ಉದ್ದೇಶ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ತಿಳಿಸಿದ್ದಾರೆ.

ಪೂಜಾ ಬಂಧನವಾಗಿಲ್ಲ. ‘ಸಕಾಲದಲ್ಲಿ ಅವರನ್ನು ಬಂಧಿಸಲಾಗುವುದು’ ಎಂದು ಎಸ್‌ಪಿ ತಿಳಿಸಿದ್ದಾರೆ. ಆರೋಪಿಯ ವಯಸ್ಸು ಮತ್ತು ಇತರ ವಿವರಗಳು ಲಭ್ಯವಾಗಿಲ್ಲ. ಅವುಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೂಜಾ ವೀರಶೆಟ್ಟಿಯವರ ಭಾಷಣಕ್ಕೆ ಸಂಬಂಧಿಸಿದಂತೆ ವಿರೋಧಗಳು ವ್ಯಕ್ತವಾಗುತ್ತಿದ್ದರೂ ಪ್ರಕರಣ ದಾಖಲಾಗಿರಲಿಲ್ಲ. ಈ ಸಂಬಂಧ  ‘ನಾನುಗೌರಿ.ಕಾಂ’ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ಕುಮಾರ್‌ ಅವರನ್ನು ಸಂಪರ್ಕಿಸಿತ್ತು.

“ಯಾರೂ ಇದುವರೆಗೆ ದೂರು ನೀಡಿಲ್ಲ. ಕಾನೂನು ತಜ್ಞರ ಬಳಿ ಮಾತನಾಡುತ್ತಿದ್ದೇವೆ. ಅವರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಎಸ್‌ಪಿ ತಿಳಿಸಿದ್ದರು.

“ಸುಮೊಟೊ ಪ್ರಕರಣವಾದರೂ ದಾಖಲಾಗಬಹುದಿತ್ತು. ಕ್ಷುಲ್ಲಕ ಟ್ವೀಟ್‌ವೊಂದಕ್ಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಮೇಲೆ ಪ್ರಕರಣ ದಾಖಲಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ ನೀಡಲಾಗಿದೆ. ಹರಿದ್ವಾರದಲ್ಲಿ ನರಹತ್ಯೆಗೆ ಕರೆ ನೀಡಿದ ಬಳಿಕ ಕರ್ನಾಟಕದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಘನತೆ ಹಾಳಾಗುತ್ತಿದೆಯಲ್ಲ” ಎಂದು ಪ್ರಶ್ನಿಸಿದಾಗ, “ಈ ಕುರಿತು ತನಿಖೆಯಾಗುತ್ತಿದೆ. ತಜ್ಞರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಆನಂದ್‌ಕುಮಾರ್‌ ಹೇಳಿದ್ದರು.

ಏನಿದು ಪ್ರಕರಣ?

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದರು.

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೇ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡಿದ್ದರು.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ.

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದರು. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದರು.

 

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದರು.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದರು. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದರು.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...