Homeಕರ್ನಾಟಕವಿಜಯಪುರ | ಕೆನರಾ ಬ್ಯಾಂಕಿನಿಂದ 52 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳತನ

ವಿಜಯಪುರ | ಕೆನರಾ ಬ್ಯಾಂಕಿನಿಂದ 52 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳತನ

- Advertisement -
- Advertisement -

ರಾಜ್ಯದ ವಿಜಯಪುರ ಜಿಲ್ಲೆಯ ಕೆನರಾ ಬ್ಯಾಂಕ್‌ನಿಂದ ಬರೋಬ್ಬರಿ 52 ಕೋಟಿ ರೂಪಾಯಿ ಮೌಲ್ಯದ 51 ಕೆಜಿ ಚಿನ್ನವನ್ನು ಕಳ್ಳರು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ವರದಿಯಾದ ಅತಿ ದೊಡ್ಡ ಚಿನ್ನ ದರೋಡೆ ಪ್ರಕರಣಗಳಲ್ಲಿ ಇದು ಒಂದಾಗಿದ್ದು, ಕಳ್ಳರು ಕಳೆದ ತಿಂಗಳ ವಾರಾಂತ್ಯದಲ್ಲಿ ಈ ಕೃತ್ಯವನ್ನು ಎಸಗಿದ್ದಾರೆ ಎಂದು ವರದಿ ಸೂಚಿಸಿದೆ. ವಿಜಯಪುರ | ಕೆನರಾ ಬ್ಯಾಂಕಿನಿಂದ

ಮೇ 23 ರಂದು ವಿಜಯಪುರದ ಕೆನರಾ ಬ್ಯಾಂಕಿನ ಮನಗುಳಿ ಶಾಖೆಯಲ್ಲಿ ಕಳ್ಳತನ ನಡೆದಿದ್ದರೂ, ಮೇ 26 ರಂದು ಸಿಬ್ಬಂದಿ ಕೆಲಸಕ್ಕೆ ಮರಳಿದಾಗ ಅಪರಾಧ ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ವರದಿ ಹೇಳಿದೆ.

ಕಳ್ಳರು 51 ಕಿಲೋಗ್ರಾಂ ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದರೂ, ಲೂಟಿ ಮಾಡಿದ ವಸ್ತುಗಳ ಸಾಗಣೆಯ ವಿಧಾನದ ಬಗ್ಗೆ ಪೊಲೀಸರಿಗೆ ಇನ್ನೂ ಮಾಹಿತಿ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಸೋಮವಾರ, ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರು, ಮೇ 23 ರಂದು ಸಂಜೆ 6 ಗಂಟೆಯಿಂದ ಮೇ 25 ರಂದು ಬೆಳಿಗ್ಗೆ 11.30 ರ ನಡುವೆ ಚಿನ್ನಾಭರಣಗಳನ್ನು ಕದ್ದಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

“ಆರೋಪಿಗಳನ್ನು ಬಂಧಿಸಲು ನಾವು ಎಂಟು ತಂಡಗಳನ್ನು ರಚಿಸಿದ್ದೇವೆ. ಕಳ್ಳತನದಲ್ಲಿ 6 ರಿಂದ 8 ಜನರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದು ಪೂರ್ವ ಯೋಜಿತ ಕಳ್ಳತನ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತೆಗೆ ಕಳ್ಳರು ಅಪರಾಧ ಮಾಡಲು ದೀರ್ಘ ವಾರಾಂತ್ಯಕ್ಕಾಗಿ, ಎರಡನೇ ಶನಿವಾರ ಮತ್ತು ಭಾನುವಾರ ಕಾಯುತ್ತಿದ್ದರು. ನಕಲಿ ಕೀಲಿಯನ್ನು ಬಳಸಿ ಕಳ್ಳರು ಬ್ಯಾಂಕ್‌ಗೆ ಪ್ರವೇಶಿಸಿದ್ದು, ಅಲಾರಂ ಅನ್ನು ಆಫ್ ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಅವರು ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಆಫ್ ಮಾಡಿದ್ದು, ನೆಟ್‌ವರ್ಕ್ ವೀಡಿಯೊ ರೆಕಾರ್ಡರ್ (ಎನ್‌ವಿಆರ್) ಅನ್ನು ಕದ್ದೊಯ್ದಿದ್ದಾರೆ ಎಮದು ಅವರು ಹೇಳಿದ್ದಾರೆ. ಕಳ್ಳರು ಬ್ಯಾಂಕ್ ಲಾಕರ್‌ಗಳನ್ನು ಮಾತ್ರ ತೆರೆದು ಚಿನ್ನದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಕಳ್ಳತನದ ನಂತರ, ಆರೋಪಿಗಳು ಕಪ್ಪು ಬಣ್ಣದ ಗೊಂಬೆಯನ್ನು ಇಟ್ಟು ಹೋಗಿದ್ದು, ಇದು ಅಪರಾಧ ಸ್ಥಳದಲ್ಲಿ ಅವರು ಯಾವುದೋ ಆಚರಣೆಯನ್ನು ಮಾಡಿದ್ದಾರೆ ಎಂದು ತೋರುತ್ತದೆ ಎಂದು ವಿಜಯಪುರ ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 28 ರಂದು, ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಿಂದ ಒಂದು ಗ್ಯಾಂಗ್ 13 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಕದ್ದಿದೆ. ನಂತರ ದಾವಣಗೆರೆ ಪೊಲೀಸರು ಅಪರಾಧದಲ್ಲಿ ಭಾಗಿಯಾಗಿದ್ದ ಆರು ಜನರನ್ನು ಬಂಧಿಸಿದ್ದಾರೆ.

ಈ ವರ್ಷದ ಜನವರಿ 17 ರಂದು ಮಂಗಳೂರಿನ ಕೋಟೆಕಾರ್‌ನಲ್ಲಿರುವ ವ್ಯವಸಾಯ ಸೇವಾ ಸಹಕಾರಿ ಸಂಘ ಬ್ಯಾಂಕ್‌ನಲ್ಲಿ 12 ಕೋಟಿ ರೂ. ಮೌಲ್ಯದ ಚಿನ್ನವನ್ನು ದೋಚಿದ್ದ ತಂಡವೊಂದು ದರೋಡೆ ಮಾಡಿತ್ತು. ಈ ದರೋಡೆಗೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದರು. ವಿಜಯಪುರ | ಕೆನರಾ ಬ್ಯಾಂಕಿನಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...