Homeಕರ್ನಾಟಕವಿಜಯಪುರ | ಕೆನರಾ ಬ್ಯಾಂಕಿನಿಂದ 52 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳತನ

ವಿಜಯಪುರ | ಕೆನರಾ ಬ್ಯಾಂಕಿನಿಂದ 52 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳತನ

- Advertisement -
- Advertisement -

ರಾಜ್ಯದ ವಿಜಯಪುರ ಜಿಲ್ಲೆಯ ಕೆನರಾ ಬ್ಯಾಂಕ್‌ನಿಂದ ಬರೋಬ್ಬರಿ 52 ಕೋಟಿ ರೂಪಾಯಿ ಮೌಲ್ಯದ 51 ಕೆಜಿ ಚಿನ್ನವನ್ನು ಕಳ್ಳರು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ವರದಿಯಾದ ಅತಿ ದೊಡ್ಡ ಚಿನ್ನ ದರೋಡೆ ಪ್ರಕರಣಗಳಲ್ಲಿ ಇದು ಒಂದಾಗಿದ್ದು, ಕಳ್ಳರು ಕಳೆದ ತಿಂಗಳ ವಾರಾಂತ್ಯದಲ್ಲಿ ಈ ಕೃತ್ಯವನ್ನು ಎಸಗಿದ್ದಾರೆ ಎಂದು ವರದಿ ಸೂಚಿಸಿದೆ. ವಿಜಯಪುರ | ಕೆನರಾ ಬ್ಯಾಂಕಿನಿಂದ

ಮೇ 23 ರಂದು ವಿಜಯಪುರದ ಕೆನರಾ ಬ್ಯಾಂಕಿನ ಮನಗುಳಿ ಶಾಖೆಯಲ್ಲಿ ಕಳ್ಳತನ ನಡೆದಿದ್ದರೂ, ಮೇ 26 ರಂದು ಸಿಬ್ಬಂದಿ ಕೆಲಸಕ್ಕೆ ಮರಳಿದಾಗ ಅಪರಾಧ ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ವರದಿ ಹೇಳಿದೆ.

ಕಳ್ಳರು 51 ಕಿಲೋಗ್ರಾಂ ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದರೂ, ಲೂಟಿ ಮಾಡಿದ ವಸ್ತುಗಳ ಸಾಗಣೆಯ ವಿಧಾನದ ಬಗ್ಗೆ ಪೊಲೀಸರಿಗೆ ಇನ್ನೂ ಮಾಹಿತಿ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಸೋಮವಾರ, ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರು, ಮೇ 23 ರಂದು ಸಂಜೆ 6 ಗಂಟೆಯಿಂದ ಮೇ 25 ರಂದು ಬೆಳಿಗ್ಗೆ 11.30 ರ ನಡುವೆ ಚಿನ್ನಾಭರಣಗಳನ್ನು ಕದ್ದಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

“ಆರೋಪಿಗಳನ್ನು ಬಂಧಿಸಲು ನಾವು ಎಂಟು ತಂಡಗಳನ್ನು ರಚಿಸಿದ್ದೇವೆ. ಕಳ್ಳತನದಲ್ಲಿ 6 ರಿಂದ 8 ಜನರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದು ಪೂರ್ವ ಯೋಜಿತ ಕಳ್ಳತನ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತೆಗೆ ಕಳ್ಳರು ಅಪರಾಧ ಮಾಡಲು ದೀರ್ಘ ವಾರಾಂತ್ಯಕ್ಕಾಗಿ, ಎರಡನೇ ಶನಿವಾರ ಮತ್ತು ಭಾನುವಾರ ಕಾಯುತ್ತಿದ್ದರು. ನಕಲಿ ಕೀಲಿಯನ್ನು ಬಳಸಿ ಕಳ್ಳರು ಬ್ಯಾಂಕ್‌ಗೆ ಪ್ರವೇಶಿಸಿದ್ದು, ಅಲಾರಂ ಅನ್ನು ಆಫ್ ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಅವರು ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಆಫ್ ಮಾಡಿದ್ದು, ನೆಟ್‌ವರ್ಕ್ ವೀಡಿಯೊ ರೆಕಾರ್ಡರ್ (ಎನ್‌ವಿಆರ್) ಅನ್ನು ಕದ್ದೊಯ್ದಿದ್ದಾರೆ ಎಮದು ಅವರು ಹೇಳಿದ್ದಾರೆ. ಕಳ್ಳರು ಬ್ಯಾಂಕ್ ಲಾಕರ್‌ಗಳನ್ನು ಮಾತ್ರ ತೆರೆದು ಚಿನ್ನದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಕಳ್ಳತನದ ನಂತರ, ಆರೋಪಿಗಳು ಕಪ್ಪು ಬಣ್ಣದ ಗೊಂಬೆಯನ್ನು ಇಟ್ಟು ಹೋಗಿದ್ದು, ಇದು ಅಪರಾಧ ಸ್ಥಳದಲ್ಲಿ ಅವರು ಯಾವುದೋ ಆಚರಣೆಯನ್ನು ಮಾಡಿದ್ದಾರೆ ಎಂದು ತೋರುತ್ತದೆ ಎಂದು ವಿಜಯಪುರ ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 28 ರಂದು, ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಿಂದ ಒಂದು ಗ್ಯಾಂಗ್ 13 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಕದ್ದಿದೆ. ನಂತರ ದಾವಣಗೆರೆ ಪೊಲೀಸರು ಅಪರಾಧದಲ್ಲಿ ಭಾಗಿಯಾಗಿದ್ದ ಆರು ಜನರನ್ನು ಬಂಧಿಸಿದ್ದಾರೆ.

ಈ ವರ್ಷದ ಜನವರಿ 17 ರಂದು ಮಂಗಳೂರಿನ ಕೋಟೆಕಾರ್‌ನಲ್ಲಿರುವ ವ್ಯವಸಾಯ ಸೇವಾ ಸಹಕಾರಿ ಸಂಘ ಬ್ಯಾಂಕ್‌ನಲ್ಲಿ 12 ಕೋಟಿ ರೂ. ಮೌಲ್ಯದ ಚಿನ್ನವನ್ನು ದೋಚಿದ್ದ ತಂಡವೊಂದು ದರೋಡೆ ಮಾಡಿತ್ತು. ಈ ದರೋಡೆಗೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದರು. ವಿಜಯಪುರ | ಕೆನರಾ ಬ್ಯಾಂಕಿನಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...