Homeಕರ್ನಾಟಕಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆದು, ಬಿ.ಕೆ ಹರಿಪ್ರಸಾದ್, ಪ್ರಕಾಶ್ ರಾಥೋಡ್, ತೇಜಸ್ವಿನಿ ಗೌಡ ಮುಂತಾದವರು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಲಕನನ್ನು ಬೆತ್ತಲುಗೊಳಿಸಿ ಬಣ್ಣ ಸುರಿದು ಚಿತ್ರಹಿಂಸೆ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಾಲಕನ ಮೇಲೆ ದೌರ್ಜನ್ಯವೆಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಕೂಡಲೇ ಜಿಲ್ಲಾ ಪೋಲಿಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಬಹಳ ಹೊತ್ತು ಚರ್ಚೆಯಾಯಿತು. ಸದನದ ಶೂನ್ಯವೇಳೆಯಲ್ಲಿ ಪ್ರಕಾಶ್ ರಾಥೋಡ್ ಪ್ರಶ್ನೆ ಎತ್ತಿದ್ದರೆ, ಅದಕ್ಕೆ ದನಿಗೂಡಿಸಿದ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, “ಸಮರ್ಪಕ ತನಿಖೆ ನಡೆದು ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು. ಆ ಮೂಲಕ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು” ಎಂದರು.

ಸಭಾಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡರವರು ಪ್ರತಿಕ್ರಿಯಿಸಿ, ಇಂತಹ ಅಮಾನವೀಯ ಪ್ರಕರಣಗಳು ನಡೆಯಬಾರದು ಎಂದರು. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಈ ಘಟನೆಯ ಬಗ್ಗೆ ತೀವ್ರ ನೋವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಪ್ರಕರಣದ ವಿವರ 

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಜರುಗಿತ್ತು.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...