Homeಕರ್ನಾಟಕಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆದು, ಬಿ.ಕೆ ಹರಿಪ್ರಸಾದ್, ಪ್ರಕಾಶ್ ರಾಥೋಡ್, ತೇಜಸ್ವಿನಿ ಗೌಡ ಮುಂತಾದವರು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಲಕನನ್ನು ಬೆತ್ತಲುಗೊಳಿಸಿ ಬಣ್ಣ ಸುರಿದು ಚಿತ್ರಹಿಂಸೆ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಾಲಕನ ಮೇಲೆ ದೌರ್ಜನ್ಯವೆಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಕೂಡಲೇ ಜಿಲ್ಲಾ ಪೋಲಿಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಬಹಳ ಹೊತ್ತು ಚರ್ಚೆಯಾಯಿತು. ಸದನದ ಶೂನ್ಯವೇಳೆಯಲ್ಲಿ ಪ್ರಕಾಶ್ ರಾಥೋಡ್ ಪ್ರಶ್ನೆ ಎತ್ತಿದ್ದರೆ, ಅದಕ್ಕೆ ದನಿಗೂಡಿಸಿದ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, “ಸಮರ್ಪಕ ತನಿಖೆ ನಡೆದು ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು. ಆ ಮೂಲಕ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು” ಎಂದರು.

ಸಭಾಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡರವರು ಪ್ರತಿಕ್ರಿಯಿಸಿ, ಇಂತಹ ಅಮಾನವೀಯ ಪ್ರಕರಣಗಳು ನಡೆಯಬಾರದು ಎಂದರು. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಈ ಘಟನೆಯ ಬಗ್ಗೆ ತೀವ್ರ ನೋವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಪ್ರಕರಣದ ವಿವರ 

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಜರುಗಿತ್ತು.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...