Homeಕರ್ನಾಟಕಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆದು, ಬಿ.ಕೆ ಹರಿಪ್ರಸಾದ್, ಪ್ರಕಾಶ್ ರಾಥೋಡ್, ತೇಜಸ್ವಿನಿ ಗೌಡ ಮುಂತಾದವರು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಲಕನನ್ನು ಬೆತ್ತಲುಗೊಳಿಸಿ ಬಣ್ಣ ಸುರಿದು ಚಿತ್ರಹಿಂಸೆ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಾಲಕನ ಮೇಲೆ ದೌರ್ಜನ್ಯವೆಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಕೂಡಲೇ ಜಿಲ್ಲಾ ಪೋಲಿಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಬಹಳ ಹೊತ್ತು ಚರ್ಚೆಯಾಯಿತು. ಸದನದ ಶೂನ್ಯವೇಳೆಯಲ್ಲಿ ಪ್ರಕಾಶ್ ರಾಥೋಡ್ ಪ್ರಶ್ನೆ ಎತ್ತಿದ್ದರೆ, ಅದಕ್ಕೆ ದನಿಗೂಡಿಸಿದ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, “ಸಮರ್ಪಕ ತನಿಖೆ ನಡೆದು ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು. ಆ ಮೂಲಕ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು” ಎಂದರು.

ಸಭಾಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡರವರು ಪ್ರತಿಕ್ರಿಯಿಸಿ, ಇಂತಹ ಅಮಾನವೀಯ ಪ್ರಕರಣಗಳು ನಡೆಯಬಾರದು ಎಂದರು. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಈ ಘಟನೆಯ ಬಗ್ಗೆ ತೀವ್ರ ನೋವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಪ್ರಕರಣದ ವಿವರ 

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಜರುಗಿತ್ತು.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...