Homeಕರ್ನಾಟಕವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಲಾಗಿದೆ

- Advertisement -
- Advertisement -

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ನಡೆದಿದೆ.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು 

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆರೋಪಿ ಹಣಮಂತರಾಯನ ವಿರುದ್ದ ಪೊಲೀಸರು ಈ ಕೂಡಲೇ ಫೋಕ್ಸೋ ಕಾನೂನಿನ ಅಡಿಯಲ್ಲಿ ದೂರು ದಾಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...