Homeಕರ್ನಾಟಕವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಲಾಗಿದೆ

- Advertisement -
- Advertisement -

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ನಡೆದಿದೆ.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು 

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆರೋಪಿ ಹಣಮಂತರಾಯನ ವಿರುದ್ದ ಪೊಲೀಸರು ಈ ಕೂಡಲೇ ಫೋಕ್ಸೋ ಕಾನೂನಿನ ಅಡಿಯಲ್ಲಿ ದೂರು ದಾಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...