Homeಕರ್ನಾಟಕವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಲಾಗಿದೆ

- Advertisement -
- Advertisement -

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ನಡೆದಿದೆ.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು 

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆರೋಪಿ ಹಣಮಂತರಾಯನ ವಿರುದ್ದ ಪೊಲೀಸರು ಈ ಕೂಡಲೇ ಫೋಕ್ಸೋ ಕಾನೂನಿನ ಅಡಿಯಲ್ಲಿ ದೂರು ದಾಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...