Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...