Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...