Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...