Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...