Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....