Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...