Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...