Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...