Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...