Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...