Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...