Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...