Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...