Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...