Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...