Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...