Homeಕರ್ನಾಟಕ'ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ'

‘ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ’

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್‌. ಅಶೋಕ್ ಆಯ್ಕೆಯಾದ ನಂತರ ರಾಜ್ಯ ಬಿಜೆಪಿಯಲ್ಲಿ ಇಷ್ಟು ದಿನ ಸುಪ್ತವಾಗಿದ್ದ ಆಂತರಿಕ ಕಲಹ ಈಗ ಭುಗಿಲೆದ್ದಿದೆ. ಬಿಜೆಪಿ ಅಧಿಕಾರಲ್ಲಿ ಇದ್ದಾಗಿನಿಂದಲೂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಸಮರ ಸಾರಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತಷ್ಟು ಕುಪಿತಗೊಂಡಿದ್ದಾರೆ.

ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ಮಾಡುವಾಗ ಉತ್ತರ ಕರ್ನಾಟಕದ ನಾಯಕರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ಹೇಳುತ್ತಿದ್ದರೂ, ಪ್ರತಿಪಕ್ಷ ನಾಯಕ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಸಿಟ್ಟು ಈಗ ವಿಜಯೇಂದ್ರ ಕಡೆಗೆ ತಿರುಗಿದೆ.

ಕರ್ನಾಟಕ ಬಿಜೆಪಿಯೊಳಗೆ ಆಂತರಿಕ ಕಚ್ಚಾಟ ತೀವ್ರಗೊಂಡಿದ್ದಕ್ಕೆ ಸಾಕ್ಷಿಯಾಗಿ ಯತ್ನಾಳ್ ಮಾತನಾಡಿರುವ ಮತ್ತೊಂದು ವಿಡಿಯೋ ಇದೀಗ ಎಲ್ಲಡೆ ವೈರಲ್ ಆಗುತ್ತಿದೆ. ‘ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಪಕ್ಷದ ಹೈಕಮಾಂಡಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮುಂದೆ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ರಾತ್ರಿ ಶ್ರೀಗಳನ್ನು ಭೇಟಿ ಮಾಡಿರುವ ಯತ್ನಾಳ್, ‘ಯಡಿಯೂರಪ್ಪ ಮೇಲೆ ಹೈಕಮಾಂಡ್‌ ನಾಯಕರಿಗೆ ಯಾಕೆ ಹೆದರಿಕೆ ಬಂದಿತೋ ಗೊತ್ತಿಲ್ಲ. ಶಿಸ್ತಿನ ಬಗ್ಗೆ ಅವರು ಮಾತನಾಡುತ್ತಾರೆ. ಹಾಗಿದ್ದರೆ, ನಾವೆಲ್ಲಾ ಗುಲಾಮರೇ? ನಮಗೆ ಶಕ್ತಿ ಇಲ್ಲವೇ? ನಮಗೂ ಜನ ಬೆಂಬಲ ಇದೆ’ ಎಂದಿದ್ದಾರೆ.

‘ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವುದಿಲ್ಲ ಎಂದು ಕೇಂದ್ರ ನಾಯಕರಿಗೆ ಯಡಿಯೂರಪ್ಪ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ರಾಜ್ಯದಾದ್ಯಂತ ಸಂಚರಿಸಿ ಪಕ್ಷದ ಪರ ಪ್ರಚಾರ ಮಾಡುವ ಬದಲು ಶಿವಮೊಗ್ಗಕ್ಕೆ ಮಾತ್ರ ಸೀಮಿತವಾಗುವುದಾಗಿ ಹೈಕಮಾಂಡ್‌ಗೆ ತಿಳಿಸಿದ್ದಾರೆ’ ಎಂದರು.

‘ಸೋಮಣ್ಣ ಹರಕೆಯ ಕುರಿ; ಬೊಮ್ಮಾಯಿ ಸೋಲಿಸಲು ಹಣ ಕಳಿಸಿದ್ದರು’

ಬಿಎಸ್‌ವೈ ಕುಟುಂಬ ಲಿಂಗಾಯತ ನಾಯಕರಿಗೆ ಅನ್ಯಾಯ ಮಾಡುತ್ತಿದೆ ಎಂಬರ್ಥದಲ್ಲಿ ಶ್ರೀಗಳ ಮುಂದೆ ಮಾತನಾಡಿದ ಅವರು, ‘ಕಳೆದ ಚುನಾವಣೆಯಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದು ಅಚ್ಚರಿಯ ಸಂಗತಿ. ಈಗ ಹೈಕಮಾಂಡ್ ಅವರನ್ನೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ. ವಿಜಯೇಂದ್ರ ತಮ್ಮನ್ನು ಸೋಲಿಸಲು ಹಣ ನೀಡಿದ್ದರು ಎಂದು ಸ್ವತಃ ಬೊಮ್ಮಾಯಿ ಅವರೇ ನನಗೆ ಹೇಳಿದ್ದರು. ತಂದೆ-ಮಗ ಏನೆಲ್ಲಾ ಪಿತೂರಿ ನಡೆಸಿದ್ದಾರೆ ಎಂಬ ಸತ್ಯ ಹೊರಬರಬೇಕು’ ಎಂದು ಹೇಳಿದ್ದಾರೆ.

‘ಪ್ಯಾಲೇಸ್ ಗ್ರೌಂಡ್‌ನಲ್ಲಿ ನಾವು ರ‍್ಯಾಲಿ ಮಾಡುವಾಗ ಸಂದೀಪ್ ಪಾಟೀಲ್ ಎಂಬ ಐಪಿಎಸ್ ಆಫೀಸರ್ ಮೂಲಕ ನಮ್ಮನ್ನೆಲ್ಲಾ ಅರೆಸ್ಟ್‌ ಮಾಡಿಸುವುದಕ್ಕೆ ಮುಂದಾಗಿದ್ದ; ನಾನು ಜಾಡಿಸಿದ್ದಕ್ಕೆ ಹಿಂದೆ ಸರಿದ. ಸಂದೀಪ್ ಪಾಟೀಲರನ್ನು ಕಳುಹಿಸಿದ್ದೇ ಲಿಂಗಾಯತ ಅಧಿಕಾರಿಯಿಂದ ಲಿಂಗಾಯತ ನಾಯಕರನ್ನು ಬಂಧಿಸಲು. ಇದು ವಿಜಯೇಂದ್ರನದ್ದೇ ಕುತಂತ್ರ’ ಎಂದು ಏಕವಚನದಲ್ಲೇ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಜತೆಗೆ ಹೊಂದಾಣಿಕೆ:

‘ವಿಜಯೇಂದ್ರ ವಿರುದ್ಧ ಶಿಕಾರಿಪುರದಲ್ಲಿ ಕಾಂಗ್ರೆಸ್‌ ದುರ್ಬಲ ಅಭ್ಯರ್ಥಿಯನ್ನು ನಿಲ್ಲಿಸಿತ್ತು. ಸೋಮಣ್ಣ ವಿರುದ್ಧ ಅವರು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದರು. ಕನಕಪುರದಲ್ಲೂ ಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. ಡಿ.ಕೆ. ಶಿವಕುಮಾರ್ ಮತ್ತು ಯಡಿಯೂರಪ್ಪ ನಡುವೆ ಒಪ್ಪಂದವಾಗಿತ್ತು’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ; ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...