Homeಕರ್ನಾಟಕ'ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ'

‘ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ’

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್‌. ಅಶೋಕ್ ಆಯ್ಕೆಯಾದ ನಂತರ ರಾಜ್ಯ ಬಿಜೆಪಿಯಲ್ಲಿ ಇಷ್ಟು ದಿನ ಸುಪ್ತವಾಗಿದ್ದ ಆಂತರಿಕ ಕಲಹ ಈಗ ಭುಗಿಲೆದ್ದಿದೆ. ಬಿಜೆಪಿ ಅಧಿಕಾರಲ್ಲಿ ಇದ್ದಾಗಿನಿಂದಲೂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಸಮರ ಸಾರಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತಷ್ಟು ಕುಪಿತಗೊಂಡಿದ್ದಾರೆ.

ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ಮಾಡುವಾಗ ಉತ್ತರ ಕರ್ನಾಟಕದ ನಾಯಕರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ಹೇಳುತ್ತಿದ್ದರೂ, ಪ್ರತಿಪಕ್ಷ ನಾಯಕ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಸಿಟ್ಟು ಈಗ ವಿಜಯೇಂದ್ರ ಕಡೆಗೆ ತಿರುಗಿದೆ.

ಕರ್ನಾಟಕ ಬಿಜೆಪಿಯೊಳಗೆ ಆಂತರಿಕ ಕಚ್ಚಾಟ ತೀವ್ರಗೊಂಡಿದ್ದಕ್ಕೆ ಸಾಕ್ಷಿಯಾಗಿ ಯತ್ನಾಳ್ ಮಾತನಾಡಿರುವ ಮತ್ತೊಂದು ವಿಡಿಯೋ ಇದೀಗ ಎಲ್ಲಡೆ ವೈರಲ್ ಆಗುತ್ತಿದೆ. ‘ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಪಕ್ಷದ ಹೈಕಮಾಂಡಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮುಂದೆ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ರಾತ್ರಿ ಶ್ರೀಗಳನ್ನು ಭೇಟಿ ಮಾಡಿರುವ ಯತ್ನಾಳ್, ‘ಯಡಿಯೂರಪ್ಪ ಮೇಲೆ ಹೈಕಮಾಂಡ್‌ ನಾಯಕರಿಗೆ ಯಾಕೆ ಹೆದರಿಕೆ ಬಂದಿತೋ ಗೊತ್ತಿಲ್ಲ. ಶಿಸ್ತಿನ ಬಗ್ಗೆ ಅವರು ಮಾತನಾಡುತ್ತಾರೆ. ಹಾಗಿದ್ದರೆ, ನಾವೆಲ್ಲಾ ಗುಲಾಮರೇ? ನಮಗೆ ಶಕ್ತಿ ಇಲ್ಲವೇ? ನಮಗೂ ಜನ ಬೆಂಬಲ ಇದೆ’ ಎಂದಿದ್ದಾರೆ.

‘ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವುದಿಲ್ಲ ಎಂದು ಕೇಂದ್ರ ನಾಯಕರಿಗೆ ಯಡಿಯೂರಪ್ಪ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ರಾಜ್ಯದಾದ್ಯಂತ ಸಂಚರಿಸಿ ಪಕ್ಷದ ಪರ ಪ್ರಚಾರ ಮಾಡುವ ಬದಲು ಶಿವಮೊಗ್ಗಕ್ಕೆ ಮಾತ್ರ ಸೀಮಿತವಾಗುವುದಾಗಿ ಹೈಕಮಾಂಡ್‌ಗೆ ತಿಳಿಸಿದ್ದಾರೆ’ ಎಂದರು.

‘ಸೋಮಣ್ಣ ಹರಕೆಯ ಕುರಿ; ಬೊಮ್ಮಾಯಿ ಸೋಲಿಸಲು ಹಣ ಕಳಿಸಿದ್ದರು’

ಬಿಎಸ್‌ವೈ ಕುಟುಂಬ ಲಿಂಗಾಯತ ನಾಯಕರಿಗೆ ಅನ್ಯಾಯ ಮಾಡುತ್ತಿದೆ ಎಂಬರ್ಥದಲ್ಲಿ ಶ್ರೀಗಳ ಮುಂದೆ ಮಾತನಾಡಿದ ಅವರು, ‘ಕಳೆದ ಚುನಾವಣೆಯಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದು ಅಚ್ಚರಿಯ ಸಂಗತಿ. ಈಗ ಹೈಕಮಾಂಡ್ ಅವರನ್ನೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ. ವಿಜಯೇಂದ್ರ ತಮ್ಮನ್ನು ಸೋಲಿಸಲು ಹಣ ನೀಡಿದ್ದರು ಎಂದು ಸ್ವತಃ ಬೊಮ್ಮಾಯಿ ಅವರೇ ನನಗೆ ಹೇಳಿದ್ದರು. ತಂದೆ-ಮಗ ಏನೆಲ್ಲಾ ಪಿತೂರಿ ನಡೆಸಿದ್ದಾರೆ ಎಂಬ ಸತ್ಯ ಹೊರಬರಬೇಕು’ ಎಂದು ಹೇಳಿದ್ದಾರೆ.

‘ಪ್ಯಾಲೇಸ್ ಗ್ರೌಂಡ್‌ನಲ್ಲಿ ನಾವು ರ‍್ಯಾಲಿ ಮಾಡುವಾಗ ಸಂದೀಪ್ ಪಾಟೀಲ್ ಎಂಬ ಐಪಿಎಸ್ ಆಫೀಸರ್ ಮೂಲಕ ನಮ್ಮನ್ನೆಲ್ಲಾ ಅರೆಸ್ಟ್‌ ಮಾಡಿಸುವುದಕ್ಕೆ ಮುಂದಾಗಿದ್ದ; ನಾನು ಜಾಡಿಸಿದ್ದಕ್ಕೆ ಹಿಂದೆ ಸರಿದ. ಸಂದೀಪ್ ಪಾಟೀಲರನ್ನು ಕಳುಹಿಸಿದ್ದೇ ಲಿಂಗಾಯತ ಅಧಿಕಾರಿಯಿಂದ ಲಿಂಗಾಯತ ನಾಯಕರನ್ನು ಬಂಧಿಸಲು. ಇದು ವಿಜಯೇಂದ್ರನದ್ದೇ ಕುತಂತ್ರ’ ಎಂದು ಏಕವಚನದಲ್ಲೇ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಜತೆಗೆ ಹೊಂದಾಣಿಕೆ:

‘ವಿಜಯೇಂದ್ರ ವಿರುದ್ಧ ಶಿಕಾರಿಪುರದಲ್ಲಿ ಕಾಂಗ್ರೆಸ್‌ ದುರ್ಬಲ ಅಭ್ಯರ್ಥಿಯನ್ನು ನಿಲ್ಲಿಸಿತ್ತು. ಸೋಮಣ್ಣ ವಿರುದ್ಧ ಅವರು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದರು. ಕನಕಪುರದಲ್ಲೂ ಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. ಡಿ.ಕೆ. ಶಿವಕುಮಾರ್ ಮತ್ತು ಯಡಿಯೂರಪ್ಪ ನಡುವೆ ಒಪ್ಪಂದವಾಗಿತ್ತು’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ; ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...