Homeಕರ್ನಾಟಕಹೈಕಮಾಂಡ್ ನೀಡಿದ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್: ಯಡಿಯೂರಪ್ಪ ವಿರುದ್ಧ 11 ಪುಟಗಳ ಆರೋಪ

ಹೈಕಮಾಂಡ್ ನೀಡಿದ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್: ಯಡಿಯೂರಪ್ಪ ವಿರುದ್ಧ 11 ಪುಟಗಳ ಆರೋಪ

"ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮತ್ತು ಮೋದಿ ಶಕ್ತಿಯನ್ನು ಕುಗ್ಗಿಸಲು ಹಣ ನೀಡಿದ್ದಾರೆ"

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮತ್ತು ಯಡಿಯೂರಪ್ಪನವರ ವಿರುದ್ಧ ಗಂಭೀರವಾದ ಆರೋಪಗಳನ್ನು ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಈಗ ಮತ್ತೊಂದು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. “ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಬಿಹಾರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮತ್ತು ಮೋದಿ ಶಕ್ತಿಯನ್ನು ಕುಗ್ಗಿಸಲು ಹಣ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿಜಯೇಂದ್ರ ತಮ್ಮ ಆಪ್ತರ ಮೂಲಕ ಹಣ ಕಳುಹಿಸಿದ್ದಾರೆ. ಆರ್‌ಜೆಡಿ, ಕಾಂಗ್ರೆಸ್‌ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ. ಈ ಬಗ್ಗೆಯೂ ತನಿಖೆ ಆಗಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ರೈತರು, ಜನಸಾಮಾನ್ಯರು ಮೂಢಾತ್ಮರಲ್ಲ, ಬದಲಿಗೆ ಮೋದಿಶಾ ವಂಚಕಾತ್ಮರು | ದೇವನೂರ ಮಹಾದೇವ

“ಪಕ್ಷದಿಂದ ನನಗೆ ನೋಟಿಸ್ ಬಂದಿರುವುದು ನಿಜ. ಅದಕ್ಕೆ ಪ್ರತಿಕ್ರಿಯೆಯಾಗಿ ಹನ್ನೊಂದು ಪುಟಗಳ ಉತ್ತರ ನೀಡಿದ್ದೇನೆ. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ 45 ಪ್ಯಾರಾಗಳಲ್ಲಿ ವಿವರಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂಬುದನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದೇನೆ. ಸರ್ಕಾರದಲ್ಲಿ ಕುಟುಂಬದ ಹಸ್ತಕ್ಷೇಪ ಇರಬಾರದು ಎನ್ನುವುದು ನರೇಂದ್ರ ಮೋದಿ ಆಶಯ. ಆದರೆ, ಅವರ ಆಶಯದಂತೆ ಇಲ್ಲಿ ಸರ್ಕಾರ ಇಲ್ಲ. ಯಡಿಯೂರಪ್ಪ ಅವರ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆಯೂ ತನಿಖೆ ಮಾಡಬೇಕು ಮತ್ತು ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆಯೂ ತನಿಖೆ ಮಾಡಬೇಕು ಒತ್ತಾಯಿಸಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

“ನೋಟಿಸ್‌ಗೆ ಉತ್ತರ ಕೊಡುವಾಗ ಪತ್ರದಲ್ಲಿ ಎಲ್ಲೂ ಕ್ಷಮೆ ಯಾಚಿಸಿಲ್ಲ. ಸಿಡಿ, ಇಡಿ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ.‌ ಮಾರಿಷಸ್ ವಿಚಾರವನ್ನೂ ಬರೆದಿದ್ದೇನೆ. ಮಾರಿಷಸ್‌ಗೆ ಯಾಕೆ ಹೋಗಿದ್ದರು. ಎಷ್ಟು ಮಂದಿ ಹೋಗಿದ್ದರು. ಯಾವ ವಿಮಾನದಲ್ಲಿ ಹೋಗಿದ್ದರು, ಮಾಜಿ ಗೃಹ ಸಚಿವರೊಬ್ಬರ ಆಪ್ತ ಸಹಾಯಕನ ಮೂಲಕ ಮಾರಿಷಸ್‌ಗೆ ಹೋಗಿ ಏನೇನು ತೆಗೆದುಕೊಂಡಿದ್ದಾರೆ ಎಲ್ಲವನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ. ಇದರ ಬಗ್ಗೆಯೂ ತನಿಖೆ ಮಾಡಲು‌ ಆಗ್ರಹಿಸಿದ್ದೇನೆ” ಎಂದು ಹೇಳಿದರು.


ಇದನ್ನೂ ಓದಿ: ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...