Homeಕರ್ನಾಟಕಟಿಕೆಟ್‌ ಕೈತಪ್ಪಿದ್ದಕ್ಕೆ ಆಕ್ರೋಶ: ಸಚಿವ ಸೋಮಣ್ಣ ಭಾಷಣಕ್ಕೆ ಅಡ್ಡಿಪಡಿಸಿದ ವಿಜಯೇಂದ್ರ ಬೆಂಬಲಿಗರು

ಟಿಕೆಟ್‌ ಕೈತಪ್ಪಿದ್ದಕ್ಕೆ ಆಕ್ರೋಶ: ಸಚಿವ ಸೋಮಣ್ಣ ಭಾಷಣಕ್ಕೆ ಅಡ್ಡಿಪಡಿಸಿದ ವಿಜಯೇಂದ್ರ ಬೆಂಬಲಿಗರು

- Advertisement -
- Advertisement -

ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬೆಂಬಲಿಗರು, ವಸತಿ ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಜೋರಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಚಿವರನ್ನು ಮುಜುಗರಕ್ಕೊಳಪಡಿಸಿದ ಘಟನೆ ಮಂಗಳವಾರ ಮೈಸೂರಿನಲ್ಲಿ ನಡೆದಿದೆ.

ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೈವಿ ರವಿಶಂಕರ್ ಪರವಾಗಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಸಚಿವ ಸೋಮಣ್ಣ ಅವರ ಜೊತೆಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷರೂ ಆಗಿರುವ ಬಿವೈ  ವಿಜಯೇಂದ್ರ ಅವರೂ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಭೆಯಲ್ಲಿ ಸೋಮಣ್ಣ ಅವರು ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿಯವರನ್ನು ಹೊಗಳಿ ಭಾಷಣ ಮಾಡುತ್ತಿದ್ದರು. ಈ ವೇಳೆ ವಿಜಯೇಂದ್ರ ಅಭಿಮಾನಿಗಳು ‘ವಿಜಯೇಂದ್ರ ಅವರೇ ಮುಂದಿನ ಮುಖ್ಯಮಂತ್ರಿ’ ಎಂದು ವಿಜಯೇಂದ್ರ ಪರವಾಗಿ ಜೋರಾಗಿ ಘೋಷಣೆಗಳನ್ನು ಕೂಗಿ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಈ ವೇಳೆ ಸೋಮಣ್ಣ ಅವರು, ವಿಜಯೇಂದ್ರರಿಗೆ ಎಂಎಲ್‌ಸಿ ಚುನಾವಣೆಗೆ ಟಿಕೆಟ್ ಸಿಗುವ ಅವಕಾಶ ಕೈ ತಪ್ಪಿದ್ದರೂ ಖಂಡಿತಾ ಅವರಿಗೆ ಉತ್ತಮ ಸ್ಥಾನ ನೀಡಲಾಗುವುದು ಎಂದು ಜನರನ್ನು ಸಮಾಧಾನ ಪಡಿಸಿದ್ದಾರೆ.

ಇದನ್ನೂ ಓದಿ:ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ bjp 

ಆದರೆ ಅಲ್ಲಿ ನೆರೆದಿದ್ದ ಹಲವರು ಸೋಮಣ್ಣ ಅವರೇ ವಿಜಯೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಿಂದ ಕುಪಿತಗೊಂಡ ಸೋಮಣ್ಣ, ‘‘ವಿಜಯೇಂದ್ರ ಅವರನ್ನು ಬಲಿಪಶು ಮಾಡಬೇಡಿ. ಗೆಲುವಿನ ಹೋರಾಟದಲ್ಲಿ ಒಗ್ಗಟ್ಟಾಗಬೇಕಾದ ಸಮಯವಿದು. ಯಾರನ್ನೂ ಶ್ರೇಷ್ಠರು ಅಥವಾ ಕೀಳಾಗಿ ಕಾಣಬಾರದು, ಪ್ರತಿಯೊಬ್ಬರಿಗೂ ಅವರದ್ದೇ ಆದ ಕೊಡುಗೆ ಇರುತ್ತದೆ” ಎಂದು ಹೇಳಿದ್ದಾರೆ.

“ನಾನು ಕೂಡ ಐದಾರು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಗೌರವ ಕೊಡುವುದನ್ನು ಕಲಿಯಿರಿ. 40 ವರ್ಷ ರಾಜಕೀಯ ಮಾಡಿದ್ದೇನೆ. ಎಲ್ಲ ಆಟಗಳನ್ನು ನೋಡಿದ್ದೇನೆ. ಸ್ವಲ್ಪ ಸುಮ್ಮನೆ ಕುಳಿತುಕೊಳ್ಳಿ. ಕೆಂಪೇಗೌಡರ ಊರಲ್ಲಿ ಐದು ಬಾರಿ ಶಾಸಕನಾಗಿದ್ದೇನೆ. ಸ್ವತಂತ್ರವಾಗಿಯೂ ಗೆದ್ದಿದ್ದೇನೆ” ಎಂದು ಸೋಮಣ್ಣ ಅವರು ಹೇಳಿದ್ದಾರೆ.

ಈ ವೇಳೆ ಪಟ್ಟುಬಿಡದ ಬೆಂಬಲಿಗರು ಮಾತಿನ ಚಕಮಕಿ ಮುಂದುವರೆಸಿದ್ದರಿಂದ ಮಧ್ಯ ಪ್ರವೇಶಿಸಿದ ವಿಜಯೇಂದ್ರ ಅವರು, ಸಮಾಧಾನದಿಂದ ವರ್ತಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

“ಬಿಜೆಪಿಯಲ್ಲಿ ನನಗೆ ಯಾವುದೇ ಸ್ಥಾನಮಾನಗಳನ್ನೂ ನೀಡದೆ ಕಡೆಗಣಿಸಲಾಗಿದೆ ಎನ್ನುವುದು ತಪ್ಪು ಕಲ್ಪನೆ. ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಗೆಲ್ಲಲು ಹೋರಾಟ ನಡೆಸುವುದು ನನ್ನ ಗುರಿಯಾಗಿದೆ” ಎಂದು ಬಿವೈ ವಿಜಯೇಂದ್ರ ಅಲ್ಲಿ ತಿಳಿಸಿದ್ದಾರೆ.

ಲಿಂಗಾಯತ ಮತ್ತು ವೀರಶೈವ ಮುಖಂಡರು ಭಾಗವಹಿಸಿದ್ದ ಸಭೆಯಲ್ಲಿ ವಿಜಯೇಂದ್ರ ಮತ್ತು ಸೋಮಣ್ಣ ವೇದಿಕೆ ಹಂಚಿಕೊಂಡಿದ್ದರು. ಆದರೆ ಅವರ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ವದಂತಿಗಳು ಹರಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...