Homeಕರ್ನಾಟಕಟಿಕೆಟ್‌ ಕೈತಪ್ಪಿದ್ದಕ್ಕೆ ಆಕ್ರೋಶ: ಸಚಿವ ಸೋಮಣ್ಣ ಭಾಷಣಕ್ಕೆ ಅಡ್ಡಿಪಡಿಸಿದ ವಿಜಯೇಂದ್ರ ಬೆಂಬಲಿಗರು

ಟಿಕೆಟ್‌ ಕೈತಪ್ಪಿದ್ದಕ್ಕೆ ಆಕ್ರೋಶ: ಸಚಿವ ಸೋಮಣ್ಣ ಭಾಷಣಕ್ಕೆ ಅಡ್ಡಿಪಡಿಸಿದ ವಿಜಯೇಂದ್ರ ಬೆಂಬಲಿಗರು

- Advertisement -
- Advertisement -

ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬೆಂಬಲಿಗರು, ವಸತಿ ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಜೋರಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಚಿವರನ್ನು ಮುಜುಗರಕ್ಕೊಳಪಡಿಸಿದ ಘಟನೆ ಮಂಗಳವಾರ ಮೈಸೂರಿನಲ್ಲಿ ನಡೆದಿದೆ.

ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೈವಿ ರವಿಶಂಕರ್ ಪರವಾಗಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಸಚಿವ ಸೋಮಣ್ಣ ಅವರ ಜೊತೆಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷರೂ ಆಗಿರುವ ಬಿವೈ  ವಿಜಯೇಂದ್ರ ಅವರೂ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಭೆಯಲ್ಲಿ ಸೋಮಣ್ಣ ಅವರು ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿಯವರನ್ನು ಹೊಗಳಿ ಭಾಷಣ ಮಾಡುತ್ತಿದ್ದರು. ಈ ವೇಳೆ ವಿಜಯೇಂದ್ರ ಅಭಿಮಾನಿಗಳು ‘ವಿಜಯೇಂದ್ರ ಅವರೇ ಮುಂದಿನ ಮುಖ್ಯಮಂತ್ರಿ’ ಎಂದು ವಿಜಯೇಂದ್ರ ಪರವಾಗಿ ಜೋರಾಗಿ ಘೋಷಣೆಗಳನ್ನು ಕೂಗಿ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಈ ವೇಳೆ ಸೋಮಣ್ಣ ಅವರು, ವಿಜಯೇಂದ್ರರಿಗೆ ಎಂಎಲ್‌ಸಿ ಚುನಾವಣೆಗೆ ಟಿಕೆಟ್ ಸಿಗುವ ಅವಕಾಶ ಕೈ ತಪ್ಪಿದ್ದರೂ ಖಂಡಿತಾ ಅವರಿಗೆ ಉತ್ತಮ ಸ್ಥಾನ ನೀಡಲಾಗುವುದು ಎಂದು ಜನರನ್ನು ಸಮಾಧಾನ ಪಡಿಸಿದ್ದಾರೆ.

ಇದನ್ನೂ ಓದಿ:ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ bjp 

ಆದರೆ ಅಲ್ಲಿ ನೆರೆದಿದ್ದ ಹಲವರು ಸೋಮಣ್ಣ ಅವರೇ ವಿಜಯೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಿಂದ ಕುಪಿತಗೊಂಡ ಸೋಮಣ್ಣ, ‘‘ವಿಜಯೇಂದ್ರ ಅವರನ್ನು ಬಲಿಪಶು ಮಾಡಬೇಡಿ. ಗೆಲುವಿನ ಹೋರಾಟದಲ್ಲಿ ಒಗ್ಗಟ್ಟಾಗಬೇಕಾದ ಸಮಯವಿದು. ಯಾರನ್ನೂ ಶ್ರೇಷ್ಠರು ಅಥವಾ ಕೀಳಾಗಿ ಕಾಣಬಾರದು, ಪ್ರತಿಯೊಬ್ಬರಿಗೂ ಅವರದ್ದೇ ಆದ ಕೊಡುಗೆ ಇರುತ್ತದೆ” ಎಂದು ಹೇಳಿದ್ದಾರೆ.

“ನಾನು ಕೂಡ ಐದಾರು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಗೌರವ ಕೊಡುವುದನ್ನು ಕಲಿಯಿರಿ. 40 ವರ್ಷ ರಾಜಕೀಯ ಮಾಡಿದ್ದೇನೆ. ಎಲ್ಲ ಆಟಗಳನ್ನು ನೋಡಿದ್ದೇನೆ. ಸ್ವಲ್ಪ ಸುಮ್ಮನೆ ಕುಳಿತುಕೊಳ್ಳಿ. ಕೆಂಪೇಗೌಡರ ಊರಲ್ಲಿ ಐದು ಬಾರಿ ಶಾಸಕನಾಗಿದ್ದೇನೆ. ಸ್ವತಂತ್ರವಾಗಿಯೂ ಗೆದ್ದಿದ್ದೇನೆ” ಎಂದು ಸೋಮಣ್ಣ ಅವರು ಹೇಳಿದ್ದಾರೆ.

ಈ ವೇಳೆ ಪಟ್ಟುಬಿಡದ ಬೆಂಬಲಿಗರು ಮಾತಿನ ಚಕಮಕಿ ಮುಂದುವರೆಸಿದ್ದರಿಂದ ಮಧ್ಯ ಪ್ರವೇಶಿಸಿದ ವಿಜಯೇಂದ್ರ ಅವರು, ಸಮಾಧಾನದಿಂದ ವರ್ತಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

“ಬಿಜೆಪಿಯಲ್ಲಿ ನನಗೆ ಯಾವುದೇ ಸ್ಥಾನಮಾನಗಳನ್ನೂ ನೀಡದೆ ಕಡೆಗಣಿಸಲಾಗಿದೆ ಎನ್ನುವುದು ತಪ್ಪು ಕಲ್ಪನೆ. ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಗೆಲ್ಲಲು ಹೋರಾಟ ನಡೆಸುವುದು ನನ್ನ ಗುರಿಯಾಗಿದೆ” ಎಂದು ಬಿವೈ ವಿಜಯೇಂದ್ರ ಅಲ್ಲಿ ತಿಳಿಸಿದ್ದಾರೆ.

ಲಿಂಗಾಯತ ಮತ್ತು ವೀರಶೈವ ಮುಖಂಡರು ಭಾಗವಹಿಸಿದ್ದ ಸಭೆಯಲ್ಲಿ ವಿಜಯೇಂದ್ರ ಮತ್ತು ಸೋಮಣ್ಣ ವೇದಿಕೆ ಹಂಚಿಕೊಂಡಿದ್ದರು. ಆದರೆ ಅವರ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ವದಂತಿಗಳು ಹರಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...