Homeಕರ್ನಾಟಕಟಿಕೆಟ್‌ ಕೈತಪ್ಪಿದ್ದಕ್ಕೆ ಆಕ್ರೋಶ: ಸಚಿವ ಸೋಮಣ್ಣ ಭಾಷಣಕ್ಕೆ ಅಡ್ಡಿಪಡಿಸಿದ ವಿಜಯೇಂದ್ರ ಬೆಂಬಲಿಗರು

ಟಿಕೆಟ್‌ ಕೈತಪ್ಪಿದ್ದಕ್ಕೆ ಆಕ್ರೋಶ: ಸಚಿವ ಸೋಮಣ್ಣ ಭಾಷಣಕ್ಕೆ ಅಡ್ಡಿಪಡಿಸಿದ ವಿಜಯೇಂದ್ರ ಬೆಂಬಲಿಗರು

- Advertisement -
- Advertisement -

ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬೆಂಬಲಿಗರು, ವಸತಿ ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಜೋರಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಚಿವರನ್ನು ಮುಜುಗರಕ್ಕೊಳಪಡಿಸಿದ ಘಟನೆ ಮಂಗಳವಾರ ಮೈಸೂರಿನಲ್ಲಿ ನಡೆದಿದೆ.

ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೈವಿ ರವಿಶಂಕರ್ ಪರವಾಗಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಸಚಿವ ಸೋಮಣ್ಣ ಅವರ ಜೊತೆಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷರೂ ಆಗಿರುವ ಬಿವೈ  ವಿಜಯೇಂದ್ರ ಅವರೂ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಭೆಯಲ್ಲಿ ಸೋಮಣ್ಣ ಅವರು ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿಯವರನ್ನು ಹೊಗಳಿ ಭಾಷಣ ಮಾಡುತ್ತಿದ್ದರು. ಈ ವೇಳೆ ವಿಜಯೇಂದ್ರ ಅಭಿಮಾನಿಗಳು ‘ವಿಜಯೇಂದ್ರ ಅವರೇ ಮುಂದಿನ ಮುಖ್ಯಮಂತ್ರಿ’ ಎಂದು ವಿಜಯೇಂದ್ರ ಪರವಾಗಿ ಜೋರಾಗಿ ಘೋಷಣೆಗಳನ್ನು ಕೂಗಿ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಈ ವೇಳೆ ಸೋಮಣ್ಣ ಅವರು, ವಿಜಯೇಂದ್ರರಿಗೆ ಎಂಎಲ್‌ಸಿ ಚುನಾವಣೆಗೆ ಟಿಕೆಟ್ ಸಿಗುವ ಅವಕಾಶ ಕೈ ತಪ್ಪಿದ್ದರೂ ಖಂಡಿತಾ ಅವರಿಗೆ ಉತ್ತಮ ಸ್ಥಾನ ನೀಡಲಾಗುವುದು ಎಂದು ಜನರನ್ನು ಸಮಾಧಾನ ಪಡಿಸಿದ್ದಾರೆ.

ಇದನ್ನೂ ಓದಿ:ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ bjp 

ಆದರೆ ಅಲ್ಲಿ ನೆರೆದಿದ್ದ ಹಲವರು ಸೋಮಣ್ಣ ಅವರೇ ವಿಜಯೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಿಂದ ಕುಪಿತಗೊಂಡ ಸೋಮಣ್ಣ, ‘‘ವಿಜಯೇಂದ್ರ ಅವರನ್ನು ಬಲಿಪಶು ಮಾಡಬೇಡಿ. ಗೆಲುವಿನ ಹೋರಾಟದಲ್ಲಿ ಒಗ್ಗಟ್ಟಾಗಬೇಕಾದ ಸಮಯವಿದು. ಯಾರನ್ನೂ ಶ್ರೇಷ್ಠರು ಅಥವಾ ಕೀಳಾಗಿ ಕಾಣಬಾರದು, ಪ್ರತಿಯೊಬ್ಬರಿಗೂ ಅವರದ್ದೇ ಆದ ಕೊಡುಗೆ ಇರುತ್ತದೆ” ಎಂದು ಹೇಳಿದ್ದಾರೆ.

“ನಾನು ಕೂಡ ಐದಾರು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಗೌರವ ಕೊಡುವುದನ್ನು ಕಲಿಯಿರಿ. 40 ವರ್ಷ ರಾಜಕೀಯ ಮಾಡಿದ್ದೇನೆ. ಎಲ್ಲ ಆಟಗಳನ್ನು ನೋಡಿದ್ದೇನೆ. ಸ್ವಲ್ಪ ಸುಮ್ಮನೆ ಕುಳಿತುಕೊಳ್ಳಿ. ಕೆಂಪೇಗೌಡರ ಊರಲ್ಲಿ ಐದು ಬಾರಿ ಶಾಸಕನಾಗಿದ್ದೇನೆ. ಸ್ವತಂತ್ರವಾಗಿಯೂ ಗೆದ್ದಿದ್ದೇನೆ” ಎಂದು ಸೋಮಣ್ಣ ಅವರು ಹೇಳಿದ್ದಾರೆ.

ಈ ವೇಳೆ ಪಟ್ಟುಬಿಡದ ಬೆಂಬಲಿಗರು ಮಾತಿನ ಚಕಮಕಿ ಮುಂದುವರೆಸಿದ್ದರಿಂದ ಮಧ್ಯ ಪ್ರವೇಶಿಸಿದ ವಿಜಯೇಂದ್ರ ಅವರು, ಸಮಾಧಾನದಿಂದ ವರ್ತಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

“ಬಿಜೆಪಿಯಲ್ಲಿ ನನಗೆ ಯಾವುದೇ ಸ್ಥಾನಮಾನಗಳನ್ನೂ ನೀಡದೆ ಕಡೆಗಣಿಸಲಾಗಿದೆ ಎನ್ನುವುದು ತಪ್ಪು ಕಲ್ಪನೆ. ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಗೆಲ್ಲಲು ಹೋರಾಟ ನಡೆಸುವುದು ನನ್ನ ಗುರಿಯಾಗಿದೆ” ಎಂದು ಬಿವೈ ವಿಜಯೇಂದ್ರ ಅಲ್ಲಿ ತಿಳಿಸಿದ್ದಾರೆ.

ಲಿಂಗಾಯತ ಮತ್ತು ವೀರಶೈವ ಮುಖಂಡರು ಭಾಗವಹಿಸಿದ್ದ ಸಭೆಯಲ್ಲಿ ವಿಜಯೇಂದ್ರ ಮತ್ತು ಸೋಮಣ್ಣ ವೇದಿಕೆ ಹಂಚಿಕೊಂಡಿದ್ದರು. ಆದರೆ ಅವರ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ವದಂತಿಗಳು ಹರಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...