Homeಕರ್ನಾಟಕವಿಜಯಪುರ: 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ; ಬಿಜೆಪಿ, ಜೆಡಿಎಸ್ ತಲಾ ಒಂದು ಕ್ಷೇತ್ರದಲ್ಲಿ ಗೆಲುವು

ವಿಜಯಪುರ: 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ; ಬಿಜೆಪಿ, ಜೆಡಿಎಸ್ ತಲಾ ಒಂದು ಕ್ಷೇತ್ರದಲ್ಲಿ ಗೆಲುವು

- Advertisement -
- Advertisement -

ವಿಜಯಪುರ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಕಾಂಗ್ರೆಸ್‌ ಪಕ್ಷ ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಲಾ ಒಂದೊಂದು ಸ್ಥಾನದಲ್ಲಿ ಗೆಲುವು ಕಂಡಿದೆ.

ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ವಿಜಯಪುರ ನಗರ

ಕಾಂಗ್ರೆಸ್- ಅಮಿತ್ ಮುಶ್ರಫ್- ಸೋಲು

ಬಿಜೆಪಿ- ಬಸನಗೌಡ ಪಾಟೀಲ್ ಯತ್ನಾಳ- ಗೆಲುವು

ಜೆಡಿಎಸ್- ಬಂದೇನವಾಜ್-ಸೋಲು

ಹಿನ್ನೆಲೆ:- 2018ರಲ್ಲಿ ಬಿಜೆಪಿಯು ಕಾಂಗ್ರೆಸಿನಿಂದ ಗೆಲುವು ಕಸಿದುಕೊಂಡಿತು. ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್‌, ಕಾಂಗ್ರೆಸ್ಸಿನ ಅಬ್ದುಲ್ ಹಮೀದ್ ಮುಶ್ರಿಫ್‌ರನ್ನು 6,413 ಮತಗಳಿಂದ ಮಣಿಸಿದರು.

******

ಬಬಲೇಶ್ವರ

ಕಾಂಗ್ರೆಸ್- ಎಂಬಿ ಪಾಟೀಲ್-ಗೆಲುವು

ಬಿಜೆಪಿ- ವಿಜುಗೌಡ ಪಾಟೀಲ್-ಸೋಲು

ಜೆಡಿಎಸ್- ಬಸವರಾಜ್ ಹೊನೆವಾಡ-ಸೋಲು

ಹಿನ್ನೆಲೆ:- 2004ರಲ್ಲಿ ಹಾಗೂ 2008ರಲ್ಲಿ ಕ್ಷೇತ್ರದ ಮರುವಿಂಗಡನೆಯ ವೇಳೆ ಬದಲಾದ ಬಬಲೇಶ್ವರ ವಿಧಾನಸಭೆಯಿಂದ, 2013 ಹಾಗೂ 2018ರಿಂದ ಸತತ ಮೂರು ಬಾರಿ ಎಂ ಬಿ ಪಾಟೀಲ್ ಹ್ಯಾಟ್ರಿಕ್ಗೆಲುವು ಸಾಧಿಸಿದ್ದಾರೆ.

******

ಮುದ್ದೇಬಿಹಾಳ

ಕಾಂಗ್ರೆಸ್- ಅಪ್ಪಾಜಿ ನಾಡಗೌಡ- ಗೆಲುವು

ಬಿಜೆಪಿ- ಎಎಸ್ ಪಾಟೀಲ್ ನಡಹಳ್ಳಿ- ಸೋಲು

ಜೆಡಿಎಸ್- ಬಸವರಾಜ ಭಜಂತ್ರಿ- ಸೋಲು

ಹಿನ್ನೆಲೆ:- 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆಯಾದ ನಂತರ ಕಾಂಗ್ರೆಸ್‌ನ ಸಿ ಎಸ್ ನಾಡಗೌಡ ಅವರು, ಬಿಜೆಪಿಯ ಬಿರಾದಾರ್ ಮಂಗಳಾ ಶಾಂತಗೌಡ್ರು ಅವರನ್ನು 2403 ಕಡಿಮೆ ಮತಗಳ ಅಂತರದಿಂದ ಸೋಲಿಸಿ ನಾಲ್ಕನೇ ಬಾರಿ ವಿಧಾನಸಭೆ ಪ್ರವೇಶಿಸಿದರು. ಐದನೇ ಬಾರಿ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಚಿವೆ ವಿಮಲಾಬಾಯಿ ಜಗದೇವರಾವ್ ದೇಶಮುಖ ಅವರನ್ನು 12202 ಮತಗಳ ಅಂತರದಿಂದ ಮಣಿಸಿದರು.

2018ರಲ್ಲಿ ಐದನೆ ಬಾರಿ ಶಾಸಕರಾಗಿ ಆಯ್ಕೆಯಾಗುವ ಕಾಂಗ್ರೆಸ್‌ನ ಸಿ ಎಸ್ ನಾಡಗೌಡ ಅವರ ಕನಸು ಕೈಗೂಡಲಿಲ್ಲ. ಕ್ಷೇತ್ರದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿಯಿಂದ ಅಮೀನಪ್ಪ ಗೌಡ ಪಾಟೀಲ್ 8633 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

******

ದೇವರ ಹಿಪ್ಪರಗಿ

ಕಾಂಗ್ರೆಸ್- ಶರಣಪ್ಪ ಟಿ ಸುಣಗಾರ- ಸೋಲು

ಬಿಜೆಪಿ- ಸೋಮನಗೌಡ ಪಾಟೀಲ್- ಸೋಲು

ಜೆಡಿಎಸ್- ರಾಜುಗೌಡ ಪಾಟೀಲ್- ಗೆಲುವು

ಹಿನ್ನೆಲೆ:- 2008ರಲ್ಲಿ ಕ್ಷೇತ್ರ ಪುನರ್ವಿಂಗಡನೆಯಾದ ನಂತರ ಕಾಂಗ್ರೆಸ್‌ನ ಎ ಎಸ್ ಪಾಟೀಲ್ ನಡಹಳ್ಳಿ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 30,893 ಮತಗಳ ಭಾರಿ ಮತಗಳ ಅಂತರದಿಂದ ಸೋಲಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದರು.

2013ರಲ್ಲಿ ಎ ಎಸ್ ಪಾಟೀಲ್ ನಡಹಳ್ಳಿಗೆ ಬಿಜೆಪಿಯ ಸೋಮನಗೌಡ ಪಾಟೀಲ್ ತೀವ್ರ ಪೈಪೋಟಿ ನೀಡಿದರೂ 8,096 ಮತಗಳ ಅಂತರದಲ್ಲಿ ಸೋತರು.

2018ರಲ್ಲಿ ಬಿಜೆಪಿಯ ಸೋಮನಗೌಡ ಪಾಟೀಲ್ ಜೆಡಿಎಸ್ ಅಭ್ಯರ್ಥಿ ರಾಜುಗೌಡ ಪಾಟೀಲ್ ಅವರಿಗೆ ತೀವ್ರ ಪೈಪೋಟಿ ನೀಡಿ ಕೇವಲ 3,353 ಮತಗಳ ಅಂತರದಲ್ಲಿ ದೇವರ ಹಿಪ್ಪರಿಗಿಯಲ್ಲಿ ಮೊದಲ ಬಾರಿಗೆ ಕಮಲವನ್ನು ಅರಳಿಸಿದರು.

ಎ ಎಸ್ ಪಾಟೀಲ ನಡಹಳ್ಳಿ ಕೂಡ ಕಾಂಗ್ರೆಸ್‌ನಿಂದ 2008 ಮತ್ತು 2013ರಲ್ಲಿ ಈ ಕ್ಷೇತ್ರದಲ್ಲಿ ಎರಡು ಬಾರಿ ಗೆದ್ದಿದ್ದಾರೆ.

*******

ಬಸವನ ಬಾಗೇವಾಡಿ

ಕಾಂಗ್ರೆಸ್- ಶಿವಾನಂದ ಪಾಟೀಲ್- ಗೆಲುವು

ಬಿಜೆಪಿ- ಎಸ್‌ಕೆ ಬೆಳ್ಳುಬ್ಬಿ- ಸೋಲು

ಜೆಡಿಎಸ್- ಸೋಮನಗೌಡ ಪಾಟೀಲ್- ಸೋಲು

ಹಿನ್ನೆಲೆ:- 2018ರಲ್ಲಿ ಜೆಡಿಎಸ್‌ನ ಅಪ್ಪುಗೌಡ ತೀವ್ರ ಪೈಪೋಟಿಯ ನಡುವೆಯೂ 3,186 ಮತಗಳ ಕಡಿಮೆ ಅಂತರದಲ್ಲಿ ಕಾಂಗ್ರೆಸ್‌ನ ಶಿವಾನಂದ ಪಾಟೀಲರು ಗೆಲುವು ಸಾಧಿಸುವ ಮೂಲಕ ಬಸವನ ಬಾಗೇವಾಡಿಯಿಂದ ಮೂರನೇ ಬಾರಿ ಶಾಸಕರಾದರು. 2013ರಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಶಿವಾನಂದ ಪಾಟೀಲರು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷ ಹಾಗೂ 2018ರ ಹೆಚ್ ಡಿ ಕುಮಾರಸ್ವಾಮಿಯವರ ಸಮ್ಮಿಶ್ರ ಸರಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.

*******

ನಾಗಠಾಣ (ಎಸ್‌ಸಿ ಮೀಸಲು)

ಕಾಂಗ್ರೆಸ್- ವಿಠಲ ಕಟಕದೊಂಡ-ಕಾಂಗ್ರೆಸ್

ಬಿಜೆಪಿ- ಸಂಜೀವ್ ಐಹೊಳೆ-ಹಿನ್ನಡೆ

ಜೆಡಿಎಸ್- ದೇವಾನಂದ ಚವ್ಹಾಣ-ಹಿನ್ನಡೆ

ಹಿನ್ನೆಲೆ:- 2008ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯಾದ ನಂತರ ನಾಗಠಾಣದಲ್ಲಿ ಪ್ರಪ್ರಥಮ ಬಾರಿಗೆ ಬಿಜೆಪಿಯಿಂದ ವಿಠಲ ಧೋಂಡಿಬಾ ಕಟಕದೊಂಡ ಶಾಸಕರಾದರು. 2013ರಲ್ಲಿ ಜೆಡಿಎಸ್‌ನ ದೇವಾನಂದ ಚವ್ಹಾಣ ಅವರನ್ನು ಕೇವಲ 667 ಮತಗಳಿಂದ ಮಣಿಸಿ ಎರಡನೇ ಬಾರಿಗೆ ಕಾಂಗ್ರೆಸ್‌ನ ರಾಜು ಅಲಗೂರ ಗೆಲುವು ಸಾಧಿಸಿದರು. 2018ರಲ್ಲಿ ಕಾಂಗ್ರೆಸ್‌ನ ವಿಠಲ ಧೋಂಡಿಬಾ ಕಟಕದೊಂಡ ಅವರ ವಿರುದ್ಧ ಜೆಡಿಎಸ್‌ನ ದೇವಾನಂದ ಚವ್ಹಾಣ ಅವರು 4207 ಮತಗಳ ಅಂತರದಿಂದ ಗೆಲುವು ಕಂಡರು.

*******

ಇಂಡಿ

ಕಾಂಗ್ರೆಸ್- ಯಶವಂತರಾಯಗೌಡ ಪಾಟೀಲ್-ಗೆಲುವು

ಬಿಜೆಪಿ- ಕಾಸುಗೌಡ ಬಿರಾದಾರ್-ಸೋಲು

ಜೆಡಿಎಸ್- ಬಿಡಿ ಪಾಟೀಲ್-ಸೋಲು

ಹಿನ್ನೆಲೆ:- 2008ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯಾದ ನಂತರ ಅಂದಿನ ಚುನಾವಣೆಯಲ್ಲಿ ಡಾ ಸಾರ್ವಭೌಮ ಬಗಲಿಯವರು ಬಿಜೆಪಿಯಿಂದ ಜಯಗಳಿಸಿದ್ದರು. ಬಿಜೆಪಿಗೆ ಇದೊಂದೇ ಬಾರಿ ಇಲ್ಲಿ ಮತದಾರರು ಗೆಲುವು ನೀಡಿದ್ದರು. ನಂತರ ನಡೆದ 2013 ಚುನಾವಣೆಯಲ್ಲಿ ಕೆಜಿಪಿಯಿಂದ ಸ್ಪರ್ಧಿಸಿದ್ದ ರವಿಕಾಂತ್ ಪಾಟೀಲರನ್ನು ಕಾಂಗ್ರೆಸ್‌ನ ಯಶವಂತರಾಯ ಗೌಡ ವಿಟಾಲ ಗೌಡ ಪಾಟೀಲ್ ಅವರು 33,302 ಮತಗಳ ಭಾರಿ ಅಂತರದಿಂದ ಸೋಲಿಸಿ ಗೆಲುವು ಕಂಡಿದ್ದರು. 2018ರಲ್ಲಿ ಜೆಡಿಎಸ್‌ನ ಬಿ ಡಿ ಪಾಟೀಲ್ ಅವರನ್ನು 9,938 ಮತಗಳ ಅಂತರದಿಂದ ಮಣಿಸಿ ಕಾಂಗ್ರೆಸ್‌ನ ಯಶವಂತರಾಯ ಗೌಡ ವಿಟಾಲ ಗೌಡ ಪಾಟೀಲ್ ಅವರು ಪುನರಾಯ್ಕೆಯಾದರು.

*******

ಸಿಂದಗಿ

ಕಾಂಗ್ರೆಸ್- ಅಶೋಕ ಮನಗೂಳಿ-ಗೆಲುವು

ಬಿಜೆಪಿ- ರಮೇಶ ಭೂಸನೂರ-ಸೋಲು

ಜೆಡಿಎಸ್- ವಿಜಯಶ್ರೀ ಪಾಟೀಲ್-ಸೋಲು

ಹಿನ್ನೆಲೆ:- ಸಿಂದಗಿ ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲಿ 1962 ಹಾಗೂ 1967ರಲ್ಲಿ ಸತತ ಎರಡು ಬಾರಿ ಗೆಲುವು ಕಂಡಿದ್ದ ಸಿ ಎಂ ದೇಸಾಯಿ ಅವರನ್ನು ಹೊರತುಪಡಿಸಿದರೆ ಉಳಿದ ಯಾವ ಅಭ್ಯರ್ಥಿಯು ಸತತವಾಗಿ ಜಯ ಗಳಿಸಿರಲಿಲ್ಲ. 2008 ಮತ್ತು 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಭೂಸನೂರ ಎರಡೂ ಬಾರಿಯೂ ಗೆಲುವು ಪಡೆದು ಕಮಲ ಪಕ್ಷಕ್ಕೆ ಹ್ಯಾಟ್ರಿಕ್‌ ಜಯ ಕರುಣಿಸಿದರು.

2013ರಲ್ಲಿ ಎಂ ಸಿ ಮನಗೊಳಿ ತೀವ್ರ ಪೈಪೋಟಿ ನೀಡಿದರೂ 752 ಮತಗಳಿಂದ ಸಿ ಎಂ ದೇಸಾಯಿ ಶಾಸಕರಾಗಿ ಆಯ್ಕೆಯಾದರು.

1994ರಲ್ಲಿ ಗೆದ್ದಿದ್ದು ಬಿಟ್ಟರೆ, 1999ರಿಂದ ಸತತ ನಾಲ್ಕು ಬಾರಿ ಸೋತಿದ್ದ ಜೆಡಿಎಸ್‌ನ ಎಂ ಸಿ ಮನಗೊಳಿ 2018ರಲ್ಲಿ ಬಿಜೆಪಿಯ ರಮೇಶ್ ಭೂಸನೂರ ವಿರುದ್ಧ 9305 ಮತಗಳ ಅಂತರದಲ್ಲಿ ಎರಡನೇ ಬಾರಿಗೆ ಜಯ ದಾಖಲಿಸಿದರು. ಮನಗೂಳಿಯವರು ಒಟ್ಟು ಏಳು ಬಾರಿ ಸ್ಪರ್ಧಿಸಿದ್ದು, ಐದು ಬಾರಿ ಸೋತು ಎರಡು ಬಾರಿ ಗೆಲುವು ಪಡೆದಿರುವುದು ವಿಶೇಷ.

*******

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...