Homeಕರ್ನಾಟಕವಿಜಯಪುರ: 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ; ಬಿಜೆಪಿ, ಜೆಡಿಎಸ್ ತಲಾ ಒಂದು ಕ್ಷೇತ್ರದಲ್ಲಿ ಗೆಲುವು

ವಿಜಯಪುರ: 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ; ಬಿಜೆಪಿ, ಜೆಡಿಎಸ್ ತಲಾ ಒಂದು ಕ್ಷೇತ್ರದಲ್ಲಿ ಗೆಲುವು

- Advertisement -
- Advertisement -

ವಿಜಯಪುರ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಕಾಂಗ್ರೆಸ್‌ ಪಕ್ಷ ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಲಾ ಒಂದೊಂದು ಸ್ಥಾನದಲ್ಲಿ ಗೆಲುವು ಕಂಡಿದೆ.

ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ವಿಜಯಪುರ ನಗರ

ಕಾಂಗ್ರೆಸ್- ಅಮಿತ್ ಮುಶ್ರಫ್- ಸೋಲು

ಬಿಜೆಪಿ- ಬಸನಗೌಡ ಪಾಟೀಲ್ ಯತ್ನಾಳ- ಗೆಲುವು

ಜೆಡಿಎಸ್- ಬಂದೇನವಾಜ್-ಸೋಲು

ಹಿನ್ನೆಲೆ:- 2018ರಲ್ಲಿ ಬಿಜೆಪಿಯು ಕಾಂಗ್ರೆಸಿನಿಂದ ಗೆಲುವು ಕಸಿದುಕೊಂಡಿತು. ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್‌, ಕಾಂಗ್ರೆಸ್ಸಿನ ಅಬ್ದುಲ್ ಹಮೀದ್ ಮುಶ್ರಿಫ್‌ರನ್ನು 6,413 ಮತಗಳಿಂದ ಮಣಿಸಿದರು.

******

ಬಬಲೇಶ್ವರ

ಕಾಂಗ್ರೆಸ್- ಎಂಬಿ ಪಾಟೀಲ್-ಗೆಲುವು

ಬಿಜೆಪಿ- ವಿಜುಗೌಡ ಪಾಟೀಲ್-ಸೋಲು

ಜೆಡಿಎಸ್- ಬಸವರಾಜ್ ಹೊನೆವಾಡ-ಸೋಲು

ಹಿನ್ನೆಲೆ:- 2004ರಲ್ಲಿ ಹಾಗೂ 2008ರಲ್ಲಿ ಕ್ಷೇತ್ರದ ಮರುವಿಂಗಡನೆಯ ವೇಳೆ ಬದಲಾದ ಬಬಲೇಶ್ವರ ವಿಧಾನಸಭೆಯಿಂದ, 2013 ಹಾಗೂ 2018ರಿಂದ ಸತತ ಮೂರು ಬಾರಿ ಎಂ ಬಿ ಪಾಟೀಲ್ ಹ್ಯಾಟ್ರಿಕ್ಗೆಲುವು ಸಾಧಿಸಿದ್ದಾರೆ.

******

ಮುದ್ದೇಬಿಹಾಳ

ಕಾಂಗ್ರೆಸ್- ಅಪ್ಪಾಜಿ ನಾಡಗೌಡ- ಗೆಲುವು

ಬಿಜೆಪಿ- ಎಎಸ್ ಪಾಟೀಲ್ ನಡಹಳ್ಳಿ- ಸೋಲು

ಜೆಡಿಎಸ್- ಬಸವರಾಜ ಭಜಂತ್ರಿ- ಸೋಲು

ಹಿನ್ನೆಲೆ:- 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆಯಾದ ನಂತರ ಕಾಂಗ್ರೆಸ್‌ನ ಸಿ ಎಸ್ ನಾಡಗೌಡ ಅವರು, ಬಿಜೆಪಿಯ ಬಿರಾದಾರ್ ಮಂಗಳಾ ಶಾಂತಗೌಡ್ರು ಅವರನ್ನು 2403 ಕಡಿಮೆ ಮತಗಳ ಅಂತರದಿಂದ ಸೋಲಿಸಿ ನಾಲ್ಕನೇ ಬಾರಿ ವಿಧಾನಸಭೆ ಪ್ರವೇಶಿಸಿದರು. ಐದನೇ ಬಾರಿ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಚಿವೆ ವಿಮಲಾಬಾಯಿ ಜಗದೇವರಾವ್ ದೇಶಮುಖ ಅವರನ್ನು 12202 ಮತಗಳ ಅಂತರದಿಂದ ಮಣಿಸಿದರು.

2018ರಲ್ಲಿ ಐದನೆ ಬಾರಿ ಶಾಸಕರಾಗಿ ಆಯ್ಕೆಯಾಗುವ ಕಾಂಗ್ರೆಸ್‌ನ ಸಿ ಎಸ್ ನಾಡಗೌಡ ಅವರ ಕನಸು ಕೈಗೂಡಲಿಲ್ಲ. ಕ್ಷೇತ್ರದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿಯಿಂದ ಅಮೀನಪ್ಪ ಗೌಡ ಪಾಟೀಲ್ 8633 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

******

ದೇವರ ಹಿಪ್ಪರಗಿ

ಕಾಂಗ್ರೆಸ್- ಶರಣಪ್ಪ ಟಿ ಸುಣಗಾರ- ಸೋಲು

ಬಿಜೆಪಿ- ಸೋಮನಗೌಡ ಪಾಟೀಲ್- ಸೋಲು

ಜೆಡಿಎಸ್- ರಾಜುಗೌಡ ಪಾಟೀಲ್- ಗೆಲುವು

ಹಿನ್ನೆಲೆ:- 2008ರಲ್ಲಿ ಕ್ಷೇತ್ರ ಪುನರ್ವಿಂಗಡನೆಯಾದ ನಂತರ ಕಾಂಗ್ರೆಸ್‌ನ ಎ ಎಸ್ ಪಾಟೀಲ್ ನಡಹಳ್ಳಿ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 30,893 ಮತಗಳ ಭಾರಿ ಮತಗಳ ಅಂತರದಿಂದ ಸೋಲಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದರು.

2013ರಲ್ಲಿ ಎ ಎಸ್ ಪಾಟೀಲ್ ನಡಹಳ್ಳಿಗೆ ಬಿಜೆಪಿಯ ಸೋಮನಗೌಡ ಪಾಟೀಲ್ ತೀವ್ರ ಪೈಪೋಟಿ ನೀಡಿದರೂ 8,096 ಮತಗಳ ಅಂತರದಲ್ಲಿ ಸೋತರು.

2018ರಲ್ಲಿ ಬಿಜೆಪಿಯ ಸೋಮನಗೌಡ ಪಾಟೀಲ್ ಜೆಡಿಎಸ್ ಅಭ್ಯರ್ಥಿ ರಾಜುಗೌಡ ಪಾಟೀಲ್ ಅವರಿಗೆ ತೀವ್ರ ಪೈಪೋಟಿ ನೀಡಿ ಕೇವಲ 3,353 ಮತಗಳ ಅಂತರದಲ್ಲಿ ದೇವರ ಹಿಪ್ಪರಿಗಿಯಲ್ಲಿ ಮೊದಲ ಬಾರಿಗೆ ಕಮಲವನ್ನು ಅರಳಿಸಿದರು.

ಎ ಎಸ್ ಪಾಟೀಲ ನಡಹಳ್ಳಿ ಕೂಡ ಕಾಂಗ್ರೆಸ್‌ನಿಂದ 2008 ಮತ್ತು 2013ರಲ್ಲಿ ಈ ಕ್ಷೇತ್ರದಲ್ಲಿ ಎರಡು ಬಾರಿ ಗೆದ್ದಿದ್ದಾರೆ.

*******

ಬಸವನ ಬಾಗೇವಾಡಿ

ಕಾಂಗ್ರೆಸ್- ಶಿವಾನಂದ ಪಾಟೀಲ್- ಗೆಲುವು

ಬಿಜೆಪಿ- ಎಸ್‌ಕೆ ಬೆಳ್ಳುಬ್ಬಿ- ಸೋಲು

ಜೆಡಿಎಸ್- ಸೋಮನಗೌಡ ಪಾಟೀಲ್- ಸೋಲು

ಹಿನ್ನೆಲೆ:- 2018ರಲ್ಲಿ ಜೆಡಿಎಸ್‌ನ ಅಪ್ಪುಗೌಡ ತೀವ್ರ ಪೈಪೋಟಿಯ ನಡುವೆಯೂ 3,186 ಮತಗಳ ಕಡಿಮೆ ಅಂತರದಲ್ಲಿ ಕಾಂಗ್ರೆಸ್‌ನ ಶಿವಾನಂದ ಪಾಟೀಲರು ಗೆಲುವು ಸಾಧಿಸುವ ಮೂಲಕ ಬಸವನ ಬಾಗೇವಾಡಿಯಿಂದ ಮೂರನೇ ಬಾರಿ ಶಾಸಕರಾದರು. 2013ರಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಶಿವಾನಂದ ಪಾಟೀಲರು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷ ಹಾಗೂ 2018ರ ಹೆಚ್ ಡಿ ಕುಮಾರಸ್ವಾಮಿಯವರ ಸಮ್ಮಿಶ್ರ ಸರಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.

*******

ನಾಗಠಾಣ (ಎಸ್‌ಸಿ ಮೀಸಲು)

ಕಾಂಗ್ರೆಸ್- ವಿಠಲ ಕಟಕದೊಂಡ-ಕಾಂಗ್ರೆಸ್

ಬಿಜೆಪಿ- ಸಂಜೀವ್ ಐಹೊಳೆ-ಹಿನ್ನಡೆ

ಜೆಡಿಎಸ್- ದೇವಾನಂದ ಚವ್ಹಾಣ-ಹಿನ್ನಡೆ

ಹಿನ್ನೆಲೆ:- 2008ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯಾದ ನಂತರ ನಾಗಠಾಣದಲ್ಲಿ ಪ್ರಪ್ರಥಮ ಬಾರಿಗೆ ಬಿಜೆಪಿಯಿಂದ ವಿಠಲ ಧೋಂಡಿಬಾ ಕಟಕದೊಂಡ ಶಾಸಕರಾದರು. 2013ರಲ್ಲಿ ಜೆಡಿಎಸ್‌ನ ದೇವಾನಂದ ಚವ್ಹಾಣ ಅವರನ್ನು ಕೇವಲ 667 ಮತಗಳಿಂದ ಮಣಿಸಿ ಎರಡನೇ ಬಾರಿಗೆ ಕಾಂಗ್ರೆಸ್‌ನ ರಾಜು ಅಲಗೂರ ಗೆಲುವು ಸಾಧಿಸಿದರು. 2018ರಲ್ಲಿ ಕಾಂಗ್ರೆಸ್‌ನ ವಿಠಲ ಧೋಂಡಿಬಾ ಕಟಕದೊಂಡ ಅವರ ವಿರುದ್ಧ ಜೆಡಿಎಸ್‌ನ ದೇವಾನಂದ ಚವ್ಹಾಣ ಅವರು 4207 ಮತಗಳ ಅಂತರದಿಂದ ಗೆಲುವು ಕಂಡರು.

*******

ಇಂಡಿ

ಕಾಂಗ್ರೆಸ್- ಯಶವಂತರಾಯಗೌಡ ಪಾಟೀಲ್-ಗೆಲುವು

ಬಿಜೆಪಿ- ಕಾಸುಗೌಡ ಬಿರಾದಾರ್-ಸೋಲು

ಜೆಡಿಎಸ್- ಬಿಡಿ ಪಾಟೀಲ್-ಸೋಲು

ಹಿನ್ನೆಲೆ:- 2008ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯಾದ ನಂತರ ಅಂದಿನ ಚುನಾವಣೆಯಲ್ಲಿ ಡಾ ಸಾರ್ವಭೌಮ ಬಗಲಿಯವರು ಬಿಜೆಪಿಯಿಂದ ಜಯಗಳಿಸಿದ್ದರು. ಬಿಜೆಪಿಗೆ ಇದೊಂದೇ ಬಾರಿ ಇಲ್ಲಿ ಮತದಾರರು ಗೆಲುವು ನೀಡಿದ್ದರು. ನಂತರ ನಡೆದ 2013 ಚುನಾವಣೆಯಲ್ಲಿ ಕೆಜಿಪಿಯಿಂದ ಸ್ಪರ್ಧಿಸಿದ್ದ ರವಿಕಾಂತ್ ಪಾಟೀಲರನ್ನು ಕಾಂಗ್ರೆಸ್‌ನ ಯಶವಂತರಾಯ ಗೌಡ ವಿಟಾಲ ಗೌಡ ಪಾಟೀಲ್ ಅವರು 33,302 ಮತಗಳ ಭಾರಿ ಅಂತರದಿಂದ ಸೋಲಿಸಿ ಗೆಲುವು ಕಂಡಿದ್ದರು. 2018ರಲ್ಲಿ ಜೆಡಿಎಸ್‌ನ ಬಿ ಡಿ ಪಾಟೀಲ್ ಅವರನ್ನು 9,938 ಮತಗಳ ಅಂತರದಿಂದ ಮಣಿಸಿ ಕಾಂಗ್ರೆಸ್‌ನ ಯಶವಂತರಾಯ ಗೌಡ ವಿಟಾಲ ಗೌಡ ಪಾಟೀಲ್ ಅವರು ಪುನರಾಯ್ಕೆಯಾದರು.

*******

ಸಿಂದಗಿ

ಕಾಂಗ್ರೆಸ್- ಅಶೋಕ ಮನಗೂಳಿ-ಗೆಲುವು

ಬಿಜೆಪಿ- ರಮೇಶ ಭೂಸನೂರ-ಸೋಲು

ಜೆಡಿಎಸ್- ವಿಜಯಶ್ರೀ ಪಾಟೀಲ್-ಸೋಲು

ಹಿನ್ನೆಲೆ:- ಸಿಂದಗಿ ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲಿ 1962 ಹಾಗೂ 1967ರಲ್ಲಿ ಸತತ ಎರಡು ಬಾರಿ ಗೆಲುವು ಕಂಡಿದ್ದ ಸಿ ಎಂ ದೇಸಾಯಿ ಅವರನ್ನು ಹೊರತುಪಡಿಸಿದರೆ ಉಳಿದ ಯಾವ ಅಭ್ಯರ್ಥಿಯು ಸತತವಾಗಿ ಜಯ ಗಳಿಸಿರಲಿಲ್ಲ. 2008 ಮತ್ತು 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಭೂಸನೂರ ಎರಡೂ ಬಾರಿಯೂ ಗೆಲುವು ಪಡೆದು ಕಮಲ ಪಕ್ಷಕ್ಕೆ ಹ್ಯಾಟ್ರಿಕ್‌ ಜಯ ಕರುಣಿಸಿದರು.

2013ರಲ್ಲಿ ಎಂ ಸಿ ಮನಗೊಳಿ ತೀವ್ರ ಪೈಪೋಟಿ ನೀಡಿದರೂ 752 ಮತಗಳಿಂದ ಸಿ ಎಂ ದೇಸಾಯಿ ಶಾಸಕರಾಗಿ ಆಯ್ಕೆಯಾದರು.

1994ರಲ್ಲಿ ಗೆದ್ದಿದ್ದು ಬಿಟ್ಟರೆ, 1999ರಿಂದ ಸತತ ನಾಲ್ಕು ಬಾರಿ ಸೋತಿದ್ದ ಜೆಡಿಎಸ್‌ನ ಎಂ ಸಿ ಮನಗೊಳಿ 2018ರಲ್ಲಿ ಬಿಜೆಪಿಯ ರಮೇಶ್ ಭೂಸನೂರ ವಿರುದ್ಧ 9305 ಮತಗಳ ಅಂತರದಲ್ಲಿ ಎರಡನೇ ಬಾರಿಗೆ ಜಯ ದಾಖಲಿಸಿದರು. ಮನಗೂಳಿಯವರು ಒಟ್ಟು ಏಳು ಬಾರಿ ಸ್ಪರ್ಧಿಸಿದ್ದು, ಐದು ಬಾರಿ ಸೋತು ಎರಡು ಬಾರಿ ಗೆಲುವು ಪಡೆದಿರುವುದು ವಿಶೇಷ.

*******

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...