Homeಕರ್ನಾಟಕವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು...!

ವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು…!

- Advertisement -
|  ಶಿವಾ |
ನೀರು, ನೆರಳಿಲ್ಲದ ಬರದ ಜಿಲ್ಲೆ ವಿಜಯಪುರದಲ್ಲಿ ರಾಜಕೀಯ ನಿಗೂಢ ಬೇರು ತುಂಬಾ ಆಳವಾದದ್ದು. ಇಲ್ಲಿ ಯಾರ ‘ಕೈ’ ಯಾರ ಜೇಬೊಳಗೋ ?, ಯಾರ ಜೇಬು ಯಾರ ಕೈಯಲ್ಲೋ ? ಎನ್ನುವುದು ಜನ ಸಾಮಾನ್ಯರ ತಲೆಗೆ ಹತ್ತದ ಮಾತು. ಇಲ್ಲಿ ಏನಿದ್ದರೂ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು !
ಈ ಹಿಂದೆ ಎರಡು ಬಾರಿಯ ವಿಜಯಪುರ ಮೀಸಲು ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ವಿರುದ್ಧ ಬಂಜಾರಾ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ರಾಠೋಡ ಸ್ಪರ್ಧೆ ಮಾಡಿ ಸೋಲು ಕಂಡಿದ್ದಾರೆ. ಆದರೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಿಂದ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟಿದ್ದರಿಂದ, ಜೆಡಿಎಸ್ ಅಭ್ಯರ್ಥಿಯಾಗಿ ನಾಗಠಾಣ ಮೀಸಲು ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಅವರ ಧರ್ಮಪತ್ನಿ ಸುನೀತಾ ಚವ್ಹಾಣ ಸ್ಪರ್ಧಿಸಿದ್ದರೆ. ಬಿಜೆಪಿಯಿಂದ ಮತ್ತೆ ರಮೇಶ ಜಿಗಜಿಣಗಿ ಕಣಕ್ಕಿಳಿದಿದ್ದರೆ, ಬಿಎಸ್‍ಪಿಯಿಂದ ಯುವ ಹೋರಾಟಗಾರ ಶ್ರೀನಿವಾಸ ಪೂಜಾರಿ ಆಯ್ಕೆ ಬಯಸಿದ್ದಾರೆ.
ವಿಜಯಪುರ ರಾಜಕಾರಣದ ಚಿತ್ರಣವೇ ಬೇರೆ. ಇಲ್ಲಿ ಪಕ್ಷ, ವ್ಯಕ್ತಿಗಳಿಗಿಂತಲೂ ರಾಜಕಾರಣಿಗಳು ತಮ್ಮ ಅನುಕೂಲ ಸಿಂದುತ್ವದಡಿಯಲ್ಲಿ ರಾಜಕೀಯ ದಾಳ ಉರುಳಿಸುತ್ತಾರೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. ಹಿಂದಿನ ಫಲಿತಾಂಶಗಳು ಕೂಡ ಅದನ್ನೇ ಸೂಚಿಸುತ್ತವೆ.
ಈ ಹಿಂದಿನ ಲೋಕಸಭೆ ಚುನಾವಣೆ ವೇಳೆ, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರದ ಪೈಕಿ 7 ಮತಕ್ಷೇತ್ರದಲ್ಲೂ ಕಾಂಗ್ರೆಸ್ ನಾಯಕರೆ ವಿಧಾನಸಭೆ ಸದಸ್ಯರಾಗಿದ್ದರು. ಇಂತಹ ಸಂದರ್ಭ ತಮ್ಮದೇ ಪಕ್ಷದ ಪ್ರಕಾಶ ರಾಠೋಡ ಅವರನ್ನು ಗೆಲ್ಲಿಸಲಾಗಲಿಲ್ಲ. ಎರಡು ಬಾರಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಆಯ್ಕೆಯಾಗಿರುವುದಕ್ಕೆ ಕಾಣದ ‘ಕೈ’ಗಳೇ ಕೆಲಸ ಮಾಡಿವೆ ಎನ್ನುವ ಆರೋಪಗಳು ಇಂದಿಗೂ ಕೇಳಿ ಬರುತ್ತಿವೆ. ಈ ಬಾರಿಯೂ ಮೂರು ಬಿಜೆಪಿ ಎಂಎಲ್‍ಎಗಳನ್ನು ಹೊಂದಿರುವ ಬಿಜೆಪಿ ಅದೇ ಜಯದ ನಿರೀಕ್ಷೆಯಲ್ಲಿದೆ.
ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಈ ಬಾರಿ ಒಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಫೈಟ್ ಕೊಡಬಹದು ಎನ್ನುತ್ತಿದ್ದಾರೆ. ಕಳೆದ ಬಾರಿಯ ಮೋದಿ ಅಲೆ ಈ ಬಾರಿ ಇಲ್ಲದಿರುವುದರಿಂದಲೂ ಇವರ ಪಾಲಿಗೆ ಪ್ಲಸ್ ಪಾಯಿಂಟ್. ಬಿಎಸ್‍ಪಿಯ ಶ್ರೀನಿವಾಸ ಪೂಜಾರಿ ಪ್ರಕಾರ ಮೋದಿ ಅಲೆ ಇಲ್ಲ, ಜೆಡಿಎಸ್ ಕಾಂಗ್ರೆಸ್ ಬಳಿ ಸಮರ್ಥ ಅಭ್ಯರ್ಥಿಯೇ ಇಲ್ಲ ಹಾಗಾಗಿ ಇದು ನಮಗೆ ವರದಾನವಾಗಲಿದೆ ಎಂದಿದ್ದಾರೆ.
ಇಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಎನ್ನುವ ಪಕ್ಷಗಳು ಕೇವಲ ನೆಪಕ್ಕೆ ಮಾತ್ರ. ಆದರೆ ಅಸಲಿಯತ್ತು, ಒಳ ರಾಜಕಾರಣದ ಹೂರಣವೇ ಇಲ್ಲಿ ಕೆಲಸ ಮಾಡುವುದು ಎನ್ನುವ ಮಾತೂ ಕೇಳಿ ಬರುತ್ತಿದೆ.
ಕಾಂಗ್ರೆಸ್ ಪಕ್ಷದ ಗೃಹ ಸಚಿವ ಎಂ.ಬಿ. ಪಾಟೀಲ, ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸಚಿವ ಶಿವಾನಂದ ಪಾಟೀಲ, ನಿಗಮ ಮಂಡಳಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹಾಗೂ ಜೆಡಿಎಸ್‍ನ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಮತ್ತು ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ದೇವಾನಂದ ಚವ್ಹಾಣ ಅವರು ರಾಜ್ಯ ಸರ್ಕಾರದ ಪ್ರಮುಖ ಖಾತೆ ಹೊಂದಿದವರು. ಇದರಿಂದ ಜಿಲ್ಲೆಯಲ್ಲಿನ ಬಿಜೆಪಿ ಬಲಕ್ಕೆ ಹೋಲಿಸಿದರೆ, ಕಾಂಗ್ರೆಸ್- ಜೆಡಿಎಸ್‍ನ ಬಲ ಹೆಚ್ಚಿಗಿರುವುದು ನಿಚ್ಚಳವಾಗಿ ಕಂಡು ಬರುತ್ತದೆ. ಆದರೆ ಮೇಲ್ನೋಟಕ್ಕೆ ಮೂರು ಪಕ್ಷದ ಮುಖಂಡರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅಂತಿಮ ಹಂತದಲ್ಲಿ ಇಲ್ಲಿನ ಮತದಾರರ ನಿಲುವು, ನಿಗೂಢ ನಡೆ ಯಾರ ಕಡೆಗೆ ಒಲಿಯಲಿದೆ ಎನ್ನುವುದು ಸದ್ಯ ಹೇಳಲಾಗುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...